ಅನುಪಮ್ ಖೇರ್ 
ದೇಶ

ಅನುಪಮ್ ಖೇರ್ ಎನ್ ಐಟಿ ಭೇಟಿ ತಡೆದ ಶ್ರೀನಗರ ಪೊಲೀಸ್

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್ ಐಟಿ)ಗೆ ಭೇಟಿ ನೀಡಲು ತೆರಳಿದ್ದ ಅನುಪಮ್ ಖೇರ್ ಅವರನ್ನು ಶ್ರೀನಗರ ಪೊಲೀಸರು ವಿಮಾನ...

ಶ್ರೀನಗರ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್ ಐಟಿ)ಗೆ ಭೇಟಿ ನೀಡಲು ತೆರಳಿದ್ದ ಅನುಪಮ್ ಖೇರ್ ಅವರನ್ನು ಶ್ರೀನಗರ ಪೊಲೀಸರು ವಿಮಾನ ನಿಲ್ದಾಣದಲ್ಲೇ ತಡೆದಿದ್ದಾರೆ. 
ಇತ್ತೀಚೆಗೆ ಎರಡು ವಿದ್ಯಾರ್ಥಿಗಳ ಗುಂಪಿನ ನಡುವೆ ಸಂಘರ್ಷಣೆ ನಡೆದಿತ್ತು. ವಿದ್ಯಾರ್ಥಿಗಳಿಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಅನುಪಮ್ ಖೇರ್ ಶ್ರೀನಗರಕ್ಕೆ ತೆರಳಿದ್ದರು. 
ಆದರೆ, ಇದಕ್ಕೆ ಅಲ್ಲಿನ ಪೊಲೀಸರು ತಡೆ ನೀಡಿದ್ದಾರೆ. ಪರಿಸ್ಥಿತಿ ಸರಿಯಿಲ್ಲದ ಕಾರಣ ಭದ್ರತೆ ದೃಷ್ಟಿಯಿಂದ ನೀವು ದೆಹಲಿಗೆ ವಾಪಸ್ಸಾಗಬೇಕು ಎಂದು ಹೇಳಿ ಅನುಪಮ್ ಖೇರ್ ಅವರನ್ನು ಪೊಲೀಸರು ತಡೆದಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಿಗ್ಗೆ ತೆರಳಿದ್ದ ಅನುಪಮ್ ಖೇರ್ ಮತ್ತೆ ದೆಹಲಿಗೆ ವಾಪಸ್ಸಾಗಿದ್ದಾರೆ. ನಾನು ಎನ್ ಐಟಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ನೈತಿಕ ಬೆಂಬಲ ನೀಡಬೇಕೆಂದಿದ್ದೇನೆ. ಜೊತೆಗೆ ಅವರಿಗೆ ಉಡುಗೊರೆಯನ್ನು ತಂದಿದ್ದೇನೆ. ಸಮಸ್ಯೆಯನ್ನು ಉಂಟು ಮಾಡಲು ಎನ್ ಐಟಿಗೆ ಭೇಟಿ ನೀಡುತ್ತಿಲ್ಲ ಎಂದು ಅನುಪಮ್ ಖೇರ್ ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಈ ಮಾತುಗಳನ್ನು ಪೊಲೀಸರಿಗೆ ಹೇಳಿದೆ. ಜೊತೆಗೆ ನಿರ್ಬಂಧ ಹೇರಿರುವ ಬಗ್ಗೆ ಆದೇಶ ಪ್ರತಿ ತೋರಿಸಿ ಎಂದು ಕೂಡ ಕೇಳಿದೆ. ಆದರೆ ಅವರು ಅದಕ್ಕೆ ಅವಕಾಶ ನೀಡಲಿಲ್ಲ. ನನ್ನ ಸಂಬಂಧಿಕರ ಮನೆ ಹಾಗೂ ಕೀರ್ ಭವಾನಿ ದೇವಾಲಯಕ್ಕೂ ಭೇಟಿ ನೀಡಲು ಅವಕಾಶ ನೀಡಲಿಲ್ಲ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT