ಸಾಂದರ್ಭಿಕ ಚಿತ್ರ 
ದೇಶ

ಪಾಕ್ ನುಸುಳುಕೋರನಿಗೆ ಬಿಎಸ್‌ಎಫ್ ಗುಂಡು; ಮಾದಕವಸ್ತು ಪತ್ತೆ

ಅಮೃತಸರದ ಬೈರೋವಾಲ್ ಪ್ರದೇಶದ ಅತ್ತಾರಿ ಗಡಿಭಾಗದಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ನುಸುಳಿದ ವ್ಯಕ್ತಿಯೊಬ್ಬನನ್ನು ಭಾರತದ ಗಡಿ ರಕ್ಷಣಾ ಪಡೆ...

ಅಮೃತಸರ: ಅಮೃತಸರದ ಬೈರೋವಾಲ್ ಪ್ರದೇಶದ ಅತ್ತಾರಿ ಗಡಿಭಾಗದಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ನುಸುಳಿದ ವ್ಯಕ್ತಿಯೊಬ್ಬನನ್ನು ಭಾರತದ ಗಡಿ ರಕ್ಷಣಾ ಪಡೆ (ಬಿಎಸ್‌ಎಫ್) ಯೋಧರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. 
ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ನುಸುಳುಕೋರರು  ಭಾರತಕ್ಕೆ ನುಸುಳಲು ಯತ್ನಿಸಿದಾಗ ಬಿಎಸ್‌ಎಫ್ ಯೋಧರು ಗುಂಡು ಹಾರಿಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಒಬ್ಬ ಹತನಾಗಿದ್ದು ಇನ್ನೊಬ್ಬನಿಗೆ ಗಾಯಗಳಾಗಿವೆ. ಗಾಯಾಳುವನ್ನು ಆತನ ಜತೆಗಿದ್ದವರು ಅಲ್ಲಿಂದ ಪಾಕಿಸ್ತಾನದತ್ತ ಕರೆದೊಯ್ದಿದ್ದಾರೆ ಎಂದು ಬಲ್ಲಮೂಲಗಳು ಹೇಳಿವೆ. 
ಪಾಕಿಸ್ತಾನದಿಂದ ನುಸುಳಲು ಯತ್ನಿಸಿ ಗುಂಡಿಗೆ ಬಲಿಯಾದ ಆ ವ್ಯಕ್ತಿಯ ಕೈಯಲ್ಲಿ 9 ಪ್ಯಾಕೆಟ್ ಹೆರೋಯಿನ್ (ಮಾದಕವಸ್ತು) ಪತ್ತೆಯಾಗಿದೆ ಎಂದು ಬಿಎಸ್‌ಎಫ್ ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

SCROLL FOR NEXT