ಜೆ. ಜಯಲಲಿತಾ 
ದೇಶ

ಮತ್ತೊಮ್ಮೆ ಅಧಿಕಾರಕ್ಕೇರಿದರೆ ತಮಿಳ್ನಾಡಿನಲ್ಲಿ ಮದ್ಯ ನಿಷೇಧ: ಜಯಲಲಿತಾ

ತನ್ನನ್ನು ಮತ್ತೊಮ್ಮೆ ಅಧಿಕಾರಕ್ಕೇರಿಸಿದರೆ ತಮಿಳ್ನಾಡಿನಲ್ಲಿ ಮದ್ಯ ನಿಷೇಧ ಮಾಡುತ್ತೇನೆಂದು ತಮಿಳ್ನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಹೇಳಿದ್ದಾರೆ...

ಚೆನ್ನೈ: ತನ್ನನ್ನು ಮತ್ತೊಮ್ಮೆ ಅಧಿಕಾರಕ್ಕೇರಿಸಿದರೆ ತಮಿಳ್ನಾಡಿನಲ್ಲಿ ಮದ್ಯ ನಿಷೇಧ ಮಾಡುತ್ತೇನೆಂದು ತಮಿಳ್ನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಹೇಳಿದ್ದಾರೆ. 
ಶನಿವಾರ ಐಲ್ಯಾಂಡ್ ಗ್ರೌಂಡ್ ನಲ್ಲಿ ನಡೆದ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಜಯಲಲಿತಾ, ತಮಿಳ್ನಾಡಿನಲ್ಲಿ ಒಂದೇ ಸಲ ಮದ್ಯ ನಿಷೇಧ ಹೇರುವುದು ಕಷ್ಟ. ಆದ್ದರಿಂದ ಹಂತ ಹಂತಗಳಾಗಿ ಮದ್ಯ ನಿಷೇಧ ಮಾಡಲಾಗುವುದು ಎಂದಿದ್ದಾರೆ.
ಎಐಎಡಿಎಂಕೆ ಮತ್ತೊಮ್ಮೆ ಅಧಿಕಾರಕ್ಕೇರಿದರೆ ಹಂತ ಹಂತಗಳಾಗಿ ಮದ್ಯ ನಿಷೇಧವನ್ನು ಮಾಡಲಾಗುವುದು. ಮದ್ಯದ ಬಳಕೆ ಕಡಿಮೆಯಾಗುತ್ತಿದ್ದಂತೆ ಬಾರ್‌ಗಳನ್ನು ಮುಚ್ಚಲಾಗುವುದು. ಅದೇ ವೇಳೆ ಮದ್ಯ ಸೇವನೆ ನಿಲ್ಲಿಸಿದವರಿಗಾಗಿ ಪುನಶ್ಚೇತನ ಕೇಂದ್ರಗಳನ್ನು ಆರಂಭಿಸಲಾಗುವುದು.
197ರಲ್ಲಿ ಡಿಎಂಕೆ ಅಧ್ಯಕ್ಷ ಎಂ. ಕರುಣಾನಿಧಿ ಅವರು ಮದ್ಯ ನಿಷೇಧವನ್ನು ತಳ್ಳಿ, ಮದ್ಯ ಸೇವನೆ  ಗೊತ್ತಿಲ್ಲದ ಜನರಿಗೆ ಮದ್ಯವನ್ನು ಪರಿಚಯಿಸಿದ್ದರು. ಆದ್ದರಿಂದ ಮದ್ಯ ನಿಷೇಧದ ಬಗ್ಗೆ ಮಾತನಾಡುವ ಹಕ್ಕು ಕರುಣಾನಿಧಿ ಅವರಿಗಿಲ್ಲ ಎಂದಿದ್ದಾರೆ ಜಯಾ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಕಸಕ್ಕೆ ಎಸೆದಿದ್ದ ಲಾಟರಿ ಟಿಕೆಟ್ ಗೆ ಬಂಪರ್ ಬಹುಮಾನ! ಕೊನೆಗೂ ಹುಡುಕಾಡಿ ಬರೋಬ್ಬರಿ 10.9 ಕೋಟಿ ರೂ ಗೆದ್ದ ಮಹಿಳೆ!

UK ಮಕ್ಕಳ ಮೇಲಿನ ಅತ್ಯಾಚಾರ, ಕಳ್ಳಸಾಗಣೆ ಪ್ರಕರಣದ ಆರೋಪಿ ಈಗ ಪಿಒಕೆ ಸಂಸದ!