ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

ಕೊಲ್ಲಂ ಅಗ್ನಿ ದುರಂತ: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಕೇರಳದ ಪುಟ್ಟಿಂಗಲ್ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ಅನಾಹುತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ...

ನವದೆಹಲಿ: ಕೇರಳದ ಪುಟ್ಟಿಂಗಲ್ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ಅನಾಹುತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ.

ಘಟನೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೇರಳ ದೇಗುಲ ಅಗ್ನಿ ಅನಾಹುತವೊಂದು ಆಘಾತವನ್ನುಂಟು ಮಾಡಿದೆ. ಇದೊಂದು ಹೃದಯ ವಿದ್ರಾವಕ ಘಟನೆಯಾಗಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ.

ಅಲ್ಲದೆ, ಶೀಘ್ರದಲ್ಲೇ ಕೇರಳ ಭೇಟಿ ನೀಡುವುದಾಗಿ ಹೇಳಿರುವ ಅವರು, ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ಸಿದ್ಧವಿದೆ. ಪ್ರಕರಣ ಸಂಬಂಧ ಕೇಂದ್ರ ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ಹಣವನ್ನು ಪರಿಹಾರವಾಗಿ ನೀಡಲಿದೆ ಎಂದು ಹೇಳಿದ್ದಾರೆ.

ಕೇರಳದತ್ತ ಪ್ರಧಾನಿ ಮೋದಿ ಪ್ರಯಾಣ ಆರಂಭ
ಕೇರಳ ದೇಗುಲದಲ್ಲಿ ಸಂಭವಿಸಿರುವ ಅಗ್ನಿ ದುರಂತ ಪ್ರಕರಣ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಈಗಾಗಲೇ ವಿಶೇಷ ವಿಮಾನದ ಮೂಲಕ ಪ್ರಯಾಣ ಆರಂಭಿಸಿರುವ ಮೋದಿಯವರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ ನಡ್ಡಾ ಕೂಡ ಸಾಥ್ ನೀಡಿದ್ದು, ಮೋದಿಯವರೊಂದಿಗೆ ನುರಿತ ವೈದ್ಯರ ತಂಡ ಪ್ರಯಾಣ ಆರಂಭಿಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

Cyclone Montha: ಮೊಂತಾ ಚಂಡಮಾರುತ ತೀವ್ರ; ಆಂಧ್ರ ಪ್ರದೇಶ, ಒಡಿಶಾ ಭಾಗಗಳಲ್ಲಿ ಇಂದು ಅಪ್ಪಳಿಸುವ ಸಾಧ್ಯತೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ: ಕೇವಲ ಕ್ಯಾಪ್ ಮಾತ್ರವಲ್ಲ, ಪೊಲೀಸರ ಕಾರ್ಯಕ್ಷಮತೆಯೂ ಬದಲಾಗಲಿ; ಸಿದ್ದರಾಮಯ್ಯ

ಅಲ್ ಖೈದಾ ಜೊತೆ ನಂಟು ಆರೋಪ: ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆಯಲ್ಲಿ ಟೆಕ್ಕಿ ಬಂಧನ

fu**king country: ಕೆನಡಾದಲ್ಲಿ ಜನಾಂಗೀಯ ನಿಂದನೆ, ಭಾರತೀಯ ಕೆಲಸಗಾರ್ತಿಯನ್ನು ಕೆಟ್ಟದಾಗಿ ಬೈದ ಕೆನಡಾ ಪ್ರಜೆ! Video

SCROLL FOR NEXT