ಕೇರಳ ಗೃಹ ಸಚಿವ ರಮೇಶ್ ಚೆನ್ನಿತಲ 
ದೇಶ

ಕೊಲ್ಲಂ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಸರ್ಕಾರ

ಕೇರಳದ ಕೊಲ್ಲಂನ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತ ಪ್ರಕರಣವನ್ನು ಭಾನುವಾರ ಕೇರಳ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ...

ಕೊಲ್ಲಂ: ಕೇರಳದ ಕೊಲ್ಲಂನ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತ ಪ್ರಕರಣವನ್ನು ಭಾನುವಾರ ಕೇರಳ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇರಳ ಗೃಹ ಸಚಿವ  ರಮೇಶ್ ಚೆನ್ನಿತಲ ಅವರು, ಗಾಯಾಳುಗಳಿಗೆ ಹಾಗೂ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ತಯಾರಿದ್ದು, ಘಟನೆಯನ್ನು ಶೀಘ್ರದಲ್ಲೇ ನ್ಯಾಯಾಂಗ ತನಿಖೆಗೆ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಕೊಲ್ಲಂ ಜಿಲ್ಲೆಯಲ್ಲಿನ ಪಾರವೂರ್ ನಲ್ಲಿರುವ ಮೂಕಾಂಬಿಕ ದೇಗುಲದಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ನಡೆಸಲಾಗುತ್ತಿತ್ತು. ಪ್ರತೀ ಬಾರಿಯಂತೆ ಈ ಬಾರಿಯೂ ದೇಗುಲದಲ್ಲಿ ಬಾಣಬಿರುಸುಗಳ ಪ್ರದರ್ಶನದ ನಡೆಸಲಾಗಿದೆ. ಆದರೆ, ಆಕಾಶದಲ್ಲಿ ಹಾರುವ ಬದಲು ಪಟಾಕಿಗಳು ನೆಲದಲ್ಲೇ ಸಿಡಿದ ಪರಿಣಾಮ ಘಟನೆಯಲ್ಲಿ 85ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT