ಕೇರಳ ದೇಗುಲದಲ್ಲಿ ಅಗ್ನಿ ದುರಂತ 
ದೇಶ

ಅಗ್ನಿ ದುರಂತದ ನಂತರ ಕೇರಳ ದೇಗುಲದ ಅಧಿಕಾರಿಗಳು ನಾಪತ್ತೆ

ಕೇರಳದ ಮೂಕಾಂಬಿಕ ದೇಗುಲದಲ್ಲಿ ಅಗ್ನಿ ದುರಂತ ಸಂಭವಿಸಿದ ನಂತರ ದೇಗುಲದ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ

ಕೊಲ್ಲಂ: ಕೇರಳದ ಮೂಕಾಂಬಿಕ ದೇಗುಲದಲ್ಲಿ ಅಗ್ನಿ ದುರಂತ ಸಂಭವಿಸಿದ ನಂತರ ದೇಗುಲದ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ದೇವಾಲಯದ ಹಿರಿಯ ಅಧಿಕಾರಿಗಳ ವಿರುದ್ಧ ಶಿಕ್ಷಾರ್ಹ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಘಟನೆ ಸಂಭವಿಸಿದ ನಂತರ ಮಾಧ್ಯಮಪ್ರತಿನಿಧಿಗಳು ದೇಗುಲದ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಿದ್ದಾರೆ ಆದರೆ ಅಧಿಕಾರಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.
ಇನ್ನು ಪಟಾಕಿ ಪ್ರದರ್ಶನವನ್ನು ಆಯೋಜಿಸಿದ್ದ, ಘಟನೆಯಲ್ಲಿ ಗಾಯಗೊಂಡ ಸುರೇಂದ್ರನ್ ಹಾಗೂ ಉಮೇಶ್ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ತಿರುವನಂತಪುರಮ್ ನ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಕೊಲ್ಲಂ ಜಿಲ್ಲೆಯಲ್ಲಿನ ಪಾರವೂರ್ ನಲ್ಲಿರುವ ಮೂಕಾಂಬಿಕ ದೇಗುಲದಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ನಡೆಸಲಾಗುತ್ತಿತ್ತು. ಎಂದಿನಂತೆ ಈ ಬಾರಿಯೂ ದೇಗುಲದಲ್ಲಿ ಬಾಣಬಿರುಸುಗಳ ಪ್ರದರ್ಶನದ ನಡೆಸಲಾಗಿದೆ. ಆದರೆ ಪಟಾಕಿಗಳು ಆಕಾಶದಲ್ಲಿ ಹಾರುವ ಬದಲು ನೆಲದಲ್ಲೇ ಸಿಡಿದ ಪರಿಣಾಮ ಘಟನೆಯಲ್ಲಿ 109 ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, 350ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ತಾರಕಕ್ಕೇರಿದ ಅಮೆರಿಕಾ-ಇರಾನ್ ಸಂಘರ್ಷ; ಟ್ರಂಪ್ ಬೆದರಿಕೆಗೆ ಮಣಿಯದ ಟೆಹ್ರಾನ್, ವಿದ್ಯುತ್ ಸ್ಥಾವರ ನಾಶಪಡಿಸಿದರೆ ಭೀಕರ ಪ್ರತಿದಾಳಿ ಎಚ್ಚರಿಕೆ

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

'ಇನ್ ಯಾವ್ friendship ಇಲ್ಲ': ಇರಾನ್ ಮಿಲಿಟರಿ ಅಧಿಕಾರಿಗಳು, ಸಿಬ್ಬಂದಿಗಳ ಹೊರದಬ್ಬಿದ Saudi Arabia

ಲಷ್ಕರ್ ಉಗ್ರ Bilal Arif Sarafi ಹತ್ಯೆಗೆ ಟ್ವಿಸ್ಟ್: , ಕೊಂದಿದ್ದು 'ಧುರಂಧರ್' ಅಲ್ಲ..! ಎಂದ ಪಾಕಿಸ್ತಾನ.. ಮತ್ತೆ ಯಾರು? Video

ಕರ್ನಾಟಕ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ, ನಾಳೆ ನಾಮಪತ್ರ ಸಲ್ಲಿಕೆ

SCROLL FOR NEXT