ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ (ಸಂಗ್ರಹ ಚಿತ್ರ) 
ದೇಶ

ಮಹಿಳೆಯರು ಶನಿಶಿಂಗ್ಣಾಪುರ ದೇಗುಲ ಪ್ರವೇಶಿಸಿದರೆ ಅತ್ಯಾಚಾರ ಹೆಚ್ಚಾಗುತ್ತದೆ: ಸ್ವರೂಪಾನಂದ ಸರಸ್ವತಿ

ಪೂಜೆಗೆ ಅರ್ಹರಲ್ಲದ ಶಿರಡಿ ಸಾಯಿ ಬಾಬಾರನ್ನು ಪೂಜೆ ಮಾಡಿದ್ದಕ್ಕೆ ಮಹಾರಾಷ್ಟ್ರದಲ್ಲಿ ಬರ ಬಂತು ಎಂದು ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ...

ಹರಿದ್ವಾರ: ಪೂಜೆಗೆ ಅರ್ಹರಲ್ಲದ ಶಿರಡಿ ಸಾಯಿ ಬಾಬಾರನ್ನು ಪೂಜೆ ಮಾಡಿದ್ದಕ್ಕೆ ಮಹಾರಾಷ್ಟ್ರದಲ್ಲಿ ಬರ ಬಂತು ಎಂದು ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಅವರು ಸೋಮವಾರ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಉದ್ಭವಿಸಿರುವ ಬರ ಸಮಸ್ಯೆ ಕುರಿತಂತೆ ಹರಿದ್ವಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿರುವ ಅವರು, ಸಾಯಿ ಬಾಬ ಓರ್ವ ಫಕೀರ. ಅವರನ್ನು ಪೂಜೆ ಮಾಡುವುದರೆ ಅದು ಅಮಂಗಳಕರವಾಗುತ್ತದೆ. ಮಹಾರಾಷ್ಟ್ರದಲ್ಲಿ ಇಂದು ಬರ ಬಂದಿರುವುದು ಸಾಯಿ ಬಾಬಾರನ್ನು ಪೂಜೆ ಮಾಡಿದ ಕಾರಣಕ್ಕೆ ಎಂದು ಹೇಳಿದ್ದಾರೆ.

ಇದೇ ವೇಳೆ ಶನಿಶಿಂಗ್ಣಾಪುರ ದೇಗುಲ ವಿವಾದ ಕುರಿತಂತೆ ಮಾತನಾಡಿರು ಅವರು, ಶನಿ ಶಿಂಗ್ಣಾಪುರ ದೇಗುಲದ ಗರ್ಭಗುಡಿ ಪ್ರವೇಶಿಸಿದರೆ ದುರಾದೃಷ್ಟ. ಮಹಿಳೆಯರು ಶನಿ ಶಿಂಗ್ಣಾಪುರ ದೇಗುಲ ಪ್ರವೇಶಿಸಿದರೆ ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚಾಗುತ್ತದೆ. ಶನಿ ಪಾಪದ ಗ್ರಹವಾಗಿದ್ದು, ಮಹಿಳೆಯರಿಗೆ ಶನಿ ಶಿಂಗ್ಣಾಪುರ ದೇಗುಲ ಪ್ರವೇಶಕ್ಕೆ ಅನುಕೂಲ ಮಾಡಿಕೊಡಬಾರದು ಎಂದು ತಿಳಿಸಿದ್ದಾರೆ.

ಈ ಹಿಂದಷ್ಟೇ ಸಾಯಿಬಾಬಾ ಆರಾಧನೆ ಕುರಿತಂತೆ ಮಾತನಾಡಿದ್ದ ಶಂಕರಾಚಾರ್ಯ ಅವರು, ಸಾಯಿ ಬಾಬಾ ಮನುಷ್ಯ. ಅವರು ದೇವರಲ್ಲ...ಅವರನ್ನು ನಂಬಬೇಡಿ. ಸಾಯಿಬಾಬಾಗೆ ದೇವಸ್ಥಾನ ನಿರ್ಮಿಸುವ ಅಗತ್ಯವಿಲ್ಲ. ವಿದೇಶಿ ಸಂಸ್ಥೆಗಳು ದುಡ್ಡು ಮಾಡುವುದಕ್ಕಾಗಿ ಇಂಥಾ ಪಿತೂರಿ ನಡೆಸುತ್ತಿವೆ. ಹಿಂದೂಗಳು ಒಗ್ಗಾಟ್ಟಾಗಿ ಇರುವುದು ಅವರಿಗೆ ಇಷ್ಟವಿಲ್ಲ. ಸಾಯಿಬಾಬಾ ಅವತಾರ ಪುರುಷನಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT