ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ (ಸಂಗ್ರಹ ಚಿತ್ರ) 
ದೇಶ

ಮಹಿಳೆಯರು ಶನಿಶಿಂಗ್ಣಾಪುರ ದೇಗುಲ ಪ್ರವೇಶಿಸಿದರೆ ಅತ್ಯಾಚಾರ ಹೆಚ್ಚಾಗುತ್ತದೆ: ಸ್ವರೂಪಾನಂದ ಸರಸ್ವತಿ

ಪೂಜೆಗೆ ಅರ್ಹರಲ್ಲದ ಶಿರಡಿ ಸಾಯಿ ಬಾಬಾರನ್ನು ಪೂಜೆ ಮಾಡಿದ್ದಕ್ಕೆ ಮಹಾರಾಷ್ಟ್ರದಲ್ಲಿ ಬರ ಬಂತು ಎಂದು ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ...

ಹರಿದ್ವಾರ: ಪೂಜೆಗೆ ಅರ್ಹರಲ್ಲದ ಶಿರಡಿ ಸಾಯಿ ಬಾಬಾರನ್ನು ಪೂಜೆ ಮಾಡಿದ್ದಕ್ಕೆ ಮಹಾರಾಷ್ಟ್ರದಲ್ಲಿ ಬರ ಬಂತು ಎಂದು ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಅವರು ಸೋಮವಾರ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಉದ್ಭವಿಸಿರುವ ಬರ ಸಮಸ್ಯೆ ಕುರಿತಂತೆ ಹರಿದ್ವಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿರುವ ಅವರು, ಸಾಯಿ ಬಾಬ ಓರ್ವ ಫಕೀರ. ಅವರನ್ನು ಪೂಜೆ ಮಾಡುವುದರೆ ಅದು ಅಮಂಗಳಕರವಾಗುತ್ತದೆ. ಮಹಾರಾಷ್ಟ್ರದಲ್ಲಿ ಇಂದು ಬರ ಬಂದಿರುವುದು ಸಾಯಿ ಬಾಬಾರನ್ನು ಪೂಜೆ ಮಾಡಿದ ಕಾರಣಕ್ಕೆ ಎಂದು ಹೇಳಿದ್ದಾರೆ.

ಇದೇ ವೇಳೆ ಶನಿಶಿಂಗ್ಣಾಪುರ ದೇಗುಲ ವಿವಾದ ಕುರಿತಂತೆ ಮಾತನಾಡಿರು ಅವರು, ಶನಿ ಶಿಂಗ್ಣಾಪುರ ದೇಗುಲದ ಗರ್ಭಗುಡಿ ಪ್ರವೇಶಿಸಿದರೆ ದುರಾದೃಷ್ಟ. ಮಹಿಳೆಯರು ಶನಿ ಶಿಂಗ್ಣಾಪುರ ದೇಗುಲ ಪ್ರವೇಶಿಸಿದರೆ ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚಾಗುತ್ತದೆ. ಶನಿ ಪಾಪದ ಗ್ರಹವಾಗಿದ್ದು, ಮಹಿಳೆಯರಿಗೆ ಶನಿ ಶಿಂಗ್ಣಾಪುರ ದೇಗುಲ ಪ್ರವೇಶಕ್ಕೆ ಅನುಕೂಲ ಮಾಡಿಕೊಡಬಾರದು ಎಂದು ತಿಳಿಸಿದ್ದಾರೆ.

ಈ ಹಿಂದಷ್ಟೇ ಸಾಯಿಬಾಬಾ ಆರಾಧನೆ ಕುರಿತಂತೆ ಮಾತನಾಡಿದ್ದ ಶಂಕರಾಚಾರ್ಯ ಅವರು, ಸಾಯಿ ಬಾಬಾ ಮನುಷ್ಯ. ಅವರು ದೇವರಲ್ಲ...ಅವರನ್ನು ನಂಬಬೇಡಿ. ಸಾಯಿಬಾಬಾಗೆ ದೇವಸ್ಥಾನ ನಿರ್ಮಿಸುವ ಅಗತ್ಯವಿಲ್ಲ. ವಿದೇಶಿ ಸಂಸ್ಥೆಗಳು ದುಡ್ಡು ಮಾಡುವುದಕ್ಕಾಗಿ ಇಂಥಾ ಪಿತೂರಿ ನಡೆಸುತ್ತಿವೆ. ಹಿಂದೂಗಳು ಒಗ್ಗಾಟ್ಟಾಗಿ ಇರುವುದು ಅವರಿಗೆ ಇಷ್ಟವಿಲ್ಲ. ಸಾಯಿಬಾಬಾ ಅವತಾರ ಪುರುಷನಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT