ಪಶ್ಚಿಮ ಬಂಗಾಳ ಚುನಾವಣೆ: ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ- 5 ಗಾಯ 
ದೇಶ

ಪಶ್ಚಿಮ ಬಂಗಾಳ ಚುನಾವಣೆ: ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ- 5 ಗಾಯ

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಆರಂಭವಾಗಿದ್ದು, ಘರ್ಷಣೆ ವೇಳೆ 5 ಮಂದಿ...

ಜಮುರಿಯ: ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಆರಂಭವಾಗಿದ್ದು, ಘರ್ಷಣೆ ವೇಳೆ 5 ಮಂದಿ ಗಾಯಗೊಂಡಿರುವ ಘಟನೆ ಬರ್ಧಮಾನ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಜಟಾಪಟಿ ಆರಂಭವಾಗಿದೆ. ಈ ವೇಳೆ 5 ಮಂದಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತಂತೆ ಮಾತನಾಡಿರುವ ಹಲ್ಲೆಗೊಳಗಾದ ಸಿಪಿಐ(ಎಂ) ಕಾರ್ಯಕರ್ತ, ಟಿಎಂಸಿ ಪಕ್ಷದ 3-4 ಕಾರ್ಯಕರ್ತರು ನಮ್ಮನ್ನು ಲಾಠಿಯಿಂದ ಇದ್ದಕ್ಕಿದ್ದಂತೆ ಹೊಡೆಯಲು ಆರಂಭಿಸಿದ್ದರು. ಆದರೆ, ಸ್ಥಳದಲ್ಲಿ ಪೊಲೀಸರಿದ್ದರೂ ಕೂಡ ರಕ್ಷಣೆಗೆ ಬರಲಿಲ್ಲ ಎಂದು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ 31 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಪಶ್ಚಿಮ ಮೇದಿನಿಪುರ್, ಬಂಕುರಾ ಮತ್ತು ಬುರ್ದ್ವಾನ್ ಜಿಲ್ಲೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT