ಸಾಂದರ್ಭಿಕ ಚಿತ್ರ 
ದೇಶ

ಸಾಯಿಬಾಬಾ ಕುರಿತು ಸ್ವರೂಪಾನಂದ ಶ್ರೀಗಳ ಹೇಳಿಕೆ: ಭಕ್ತರ ತೀವ್ರ ವಿರೋಧ

ಮಹಾರಾಷ್ಟ್ರದಲ್ಲಿ ತೀವ್ರ ಬರಗಾಲವುಂಟಾಗಲು ಶಿರಡಿ ಸಾಯಿಬಾಬಾ ಅವರನ್ನು ಜನರು ಪೂಜಿಸುತ್ತಿರುವುದೇ ಕಾರಣ ಎಂದು...

ಶಿರಡಿ: ಮಹಾರಾಷ್ಟ್ರದಲ್ಲಿ ತೀವ್ರ ಬರಗಾಲವುಂಟಾಗಲು ಶಿರಡಿ ಸಾಯಿಬಾಬಾ ಅವರನ್ನು ಜನರು ಪೂಜಿಸುತ್ತಿರುವುದೇ ಕಾರಣ ಎಂದು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ನೀಡಿರುವ ಹೇಳಿಕೆಗೆ ಸಾಯಿಬಾಬಾ ಭಕ್ತರು ವ್ಯಾಪಕ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ವಿವಾದಕ್ಕೆ ಸಂಬಂಧಪಟ್ಟಂತೆ ಯಾವುದೇ ಪ್ರತಿಕ್ರಿಯೆ ನೀಡಲು ಶಿರಡಿ ಸಾಯಿಬಾಬಾ ಟ್ರಸ್ಟ್ ಅಧಿಕಾರಿಗಳು ಮುಂದೆ ಬರದಿದ್ದರೂ, ಸ್ವಾಮೀಜಿಯವರು ಅಸುರಕ್ಷತೆ ಭಾವದಿಂದ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಟ್ರಸ್ಟಿಯೊಬ್ಬರು ಹೇಳಿದ್ದಾರೆ.

ಭಕ್ತರು ಅವರ ದರ್ಶನಕ್ಕೆ ಹೋಗುವುದಿಲ್ಲ. ಅದರ ಬದಲಾಗಿ ಶಿರಡಿಗೆ ನಿತ್ಯವೂ ಸಾವಿರಾರು ಜನರು ಹೋಗುತ್ತಾರೆ ಎಂಬ ಭಾವನೆಯಿಂದ ಅವರು ತುಂಬಾ ಆತಂಕಕ್ಕೀಡಾಗಿದ್ದಾರೆ. ಭಕ್ತರಿಗೆ ಗೊಂದಲವನ್ನುಂಟುಮಾಡಲು ಹೀಗೆ ಹೇಳಿಕೆ ನೀಡಿದ್ದಾರೆ ಎಂದರು.

ಶಿರಡಿ ಸಾಯಿಬಾಬಾರನ್ನು ಪೂಜಿಸಿ ಮಹಾರಾಷ್ಟ್ರದಲ್ಲಿ ಇಷ್ಟೊಂದು ಬರಗಾಲ ಬಂದಿದೆ ಎಂದು ಅವರು ಹೇಳುವುದಾದಕೆ ಉತ್ತರಾಖಂಡದಲ್ಲಿ ಅಷ್ಟೊಂದು ನೆರೆ ಮತ್ತು ಭೂಕಂಪ ಏಕೆ ಉಂಟಾಯಿತು ಎಂಬುದಕ್ಕೆ ಅವರು ಉತ್ತರಿಸಲಿ ಎಂದು ದೇವಸ್ಥಾನದ ಮಾಜಿ ಟ್ರಸ್ಟಿ ಏಕನಾಥ ಗೊಂಡಕರ್ ಹೇಳಿದ್ದಾರೆ.

ಇನ್ನು ಭಕ್ತರು ಕೂಡ ಸ್ವರೂಪಾನಂದ ಸ್ವಾಮಿಯ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಸ್ವಾಮಿಗಳು ಪ್ರಚಾರ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಓರ್ವ ಭಕ್ತ ಹೇಳಿದ್ದಾರೆ.

ಸಾಯಿಬಾಬಾರವರು ತಮ್ಮ ಜೀವಿತ ಕಾಲದಲ್ಲಿ ಜನರಲ್ಲಿ ಏಕತೆಗೆ ಒತ್ತು ನೀಡಿದ್ದರು. ಆದರೆ ಶಂಕರಾಚಾರ್ಯರಂತಹ ಸ್ವಾಮಿಗಳು ಅವರ ಸಂದೇಶಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಇನ್ನೊಬ್ಬರು ಹೇಳಿದ್ದಾರೆ.

ಮತ್ತೊಬ್ಬ ಭಕ್ತರು ಮಾತನಾಡಿ, ಶಂಕರಾಚಾರ್ಯರ ಹೇಳಿಕೆ ಅಪಹಾಸ್ಯವಾಗಿದೆ. ಬರಗಾಲ ಗುಜರಾತ್, ಪಂಜಾಬ್, ಹರ್ಯಾಣ, ಮಧ್ಯ ಪ್ರದೇಶ ಮೊದಲಾದ ರಾಜ್ಯಗಳಲ್ಲೂ ಬಂದಿವೆ. ಹಾಗಾದರೆ ಅಲ್ಲಿನ ಬರಗಾಲಕ್ಕೆ ಏನು ಕಾರಣ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT