ಭದ್ರತಾ ಸಿಬ್ಬಂದಿಗಳ ಕಾರ್ಯಾಚರಣೆ 
ದೇಶ

ನಿಲ್ಲದ ಹಿಂಸಾಚಾರ; 3ಕ್ಕೇರಿದ ಸಾವಿನ ಸಂಖ್ಯೆ

ವಿದ್ಯಾರ್ಥಿನಿಗೆ ಯೋಧನಿಂದ ಲೈಂಗಿಕ ಕಿರುಕುಳವಾಗಿದೆ ಎಂದು ಆರೋಪಿಸಿ ಕೆಲ ಧಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹಿಂಸಾಚಾರದಲ್ಲಿ ಮಡಿದವರ ಸಂಖ್ಯೆ ಇದೀಗ 3ಕ್ಕೇರಿದೆ...

ಶ್ರೀನಗರ: ವಿದ್ಯಾರ್ಥಿನಿಗೆ ಯೋಧನಿಂದ ಲೈಂಗಿಕ ಕಿರುಕುಳವಾಗಿದೆ ಎಂದು ಆರೋಪಿಸಿ ಕೆಲ ಧಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು,  ಹಿಂಸಾಚಾರದಲ್ಲಿ ಮಡಿದವರ ಸಂಖ್ಯೆ ಇದೀಗ 3ಕ್ಕೇರಿದೆ.

ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಯೋಧರು ಹಾರಿಸಿದ ಗುಂಡಿಗೆ ನಿನ್ನೆ ಇಬ್ಬರು ಯುವಕರು ಬಲಿಯಾಗಿದ್ದರು. ಅಲ್ಲದೆ ಓರ್ವ ಮಹಿಳೆ ಸೇರಿದಂತೆ ಮೂವರು ಗಂಭೀರವಾಗಿ  ಗಾಯಗೊಂಡು ಸ್ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ 55 ವರ್ಷದ ಮಹಿಳೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಮತ್ತೊಂದೆಡೆ ಹಂದ್ವಾರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಹಬದಿಗೆ ತರಲು ಯೋಧರು ಮತ್ತು ಪೊಲೀಸರು ಹರಸಾಹಪಡುತ್ತಿದ್ದು, ಸಾರ್ವಜನಿಕರು ನಡೆಸುತ್ತಿರುವ  ಕಲ್ಲುತೂರಾಟದಿಂದಾಗಿ ಪೊಲೀಸರು ಮತ್ತು ಕೆಲ ಯೋಧರು ಕೂಡ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ್ದ ವಿದ್ಯಾರ್ಥಿನಿಗೆ ಯೋಧನೋರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದರು. ಅಲ್ಲದೆ ಈ ಕುರಿತಂತೆ ನಿನ್ನೆ  ವ್ಯಾಪಕ ಪ್ರತಿಭಟನೆ ಕೂಡ ಮಾಡಿದ್ದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಯೋಧರು ಗುಂಡುಹಾರಿಸಿದ್ದರು. ಈ ವೇಳೆ ಇಕ್ಬಾಲ್ ಅಹ್ಮದ್ ಮತ್ತು ನಯೀಮ್ ಭಟ್ ಎಂಬ ಇಬ್ಬರು  ಯುವಕರು ಮೃತಪಟ್ಟಿದ್ದರು. ಬಳಿಕ ಸಾರ್ವಜನಿಕರು ತಮ್ಮ  ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದರು. ಈ ವೇಳೆ ದೇಶ ವಿರೋಧಿ, ಪರ ಸ್ವಾತಂತ್ರ್ಯ ಘೋಷಣೆಗಳನ್ನು ಕೂಗಿ, ಮಿಲಿಟರಿ  ಬಂಕರ್ ಗಳ ಮೇಲೆ ಕಲ್ಲಿನಿಂದ ದಾಳಿ ನಡೆಸಿ ನಂತರ ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ಹಂದ್ವಾರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಎಲ್ಲೆಡೆ ಯೋಧರ ಬಿಗಿ ಭದ್ರತೆ ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT