ಕೇರಳ ಸಿಎಂ ಉಮ್ಮನ್ ಚಾಂಡಿ 
ದೇಶ

ಕೊಲ್ಲಂ ದೇಗುಲ ಅಗ್ನಿ ದುರಂತವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಿ: ಕೇಂದ್ರಕ್ಕೆ ಕೇರಳದ ಮನವಿ

ಕೊಲ್ಲಂ ನ ಮೂಕಾಂಬಿಕ ದೇವಾಲಯದಲ್ಲಿ ನಡೆದ ಅಗ್ನಿ ದುರಂತವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಬೇಕೆಂದು ಕೇರಳ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

ತಿರುವನಂತಪುರಮ್: ಕೊಲ್ಲಂ ನ ಮೂಕಾಂಬಿಕ ದೇವಾಲಯದಲ್ಲಿ ನಡೆದ ಅಗ್ನಿ ದುರಂತವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಬೇಕೆಂದು ಕೇರಳ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಅಗ್ನಿ ದುರಂತದ ಬಗ್ಗೆ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಮಾಧಮಗಳೊಂದಿಗೆ ಮಾತನಾಡಿರುವ ಕೇರಳ ಸಿಎಂ ಉಮ್ಮನ್ ಚಾಂಡಿ, ಅಗ್ನಿ ದುರಂತವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಲು ಕೇಂದ್ರ ಸರ್ಕಾರ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.
ದೇವಾಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಟಾಕಿ ಸಿಡಿಸುವಾಗ ಅಗ್ನಿ ದುರಂತ ಉಂಟಾದ ಹಿನ್ನೆಲೆಯಲ್ಲಿ ಪಟಾಕಿಗಳಿಗೆ ನಿರ್ಬಂಧ ವಿಧಿಸುವುದಕ್ಕೆ ಸಂಬಂಧಿಸಿದಂತೆ ನೀತಿಯನ್ನು ಜಾರಿಗೆ ತರುವುದರ ಬಗ್ಗೆ ಏ.14 ರಂದು ಸರ್ವಪಕ್ಷ ಸಭೆಯಲ್ಲಿ ಚರ್ಚಿಸುವುದಾಗಿ ಸಿಎಂ ಉಮ್ಮನ್ ಚಾಂಡಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಕಿ' ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ; ಉದ್ಯೋಗ ಖಾತ್ರಿ ಯೋಜನೆಗೆ ಗಾಂಧಿ ಹೆಸರು ಘೋಷಿಸಿದ ದೀದಿ!

ರಾಜ್ಯದಲ್ಲಿ ಮತ್ತೊಂದು ನೀಚ ಕೃತ್ಯ: ಪ್ರೀತಿಯ ಹೆಸರಲ್ಲಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್, ಮೂವರ ಬಂಧನ!

ಸೆಲ್ಫಿಗಾಗಿ ಯುವಕನ ಹುಚ್ಚಾಟ: ಕಾಡಾನೆ ಸಮೀಪಕ್ಕೆ ಹೋಗಿ ಫೋಟೋ ತೆಗೆದುಕೊಳ್ಳಲು ಯತ್ನ; ತುಳಿದು ಕೊಂದ ಆನೆ, Video!

ಪಾಕಿಸ್ತಾನದಲ್ಲಿ Dhurandhar ಬ್ಯಾನ್ ಆದ್ರೂ, ಬಿಲಾವಲ್ ಭುಟ್ಟೋ ಪಾರ್ಟಿಯಲ್ಲಿ ಹಾಡು! Video ವೈರಲ್!

SCROLL FOR NEXT