ಕಿರ್ಪಾಲ್ ಸಿಂಗ್ 
ದೇಶ

ಪಾಕ್ ಹೇಳಿಕೆಯನ್ನು ತಿರಸ್ಕರಿಸಿದ ಕಿರ್ಪಾಲ್ ಸಿಂಗ್ ಕುಟುಂಬಸ್ಥರು

ಪಾಕಿಸ್ತಾನದ ಸೆರೆವಾಸದಲ್ಲಿದ್ದ ಭಾರತೀಯ ಪ್ರಜೆ ಕಿರ್ಪಾಲ್ ಸಿಂಗ್ ಅವರ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಪಾಕಿಸ್ತಾನ ಸರ್ಕಾರ ನೀಡಿದ್ದ ಹೇಳಿಕೆಯನ್ನು ಕಿರ್ಪಾಲ್ ಸಿಂಗ್...

ಮುಸ್ತಾಫಾಬಾದ್: ಪಾಕಿಸ್ತಾನದ ಸೆರೆವಾಸದಲ್ಲಿದ್ದ ಭಾರತೀಯ ಪ್ರಜೆ ಕಿರ್ಪಾಲ್ ಸಿಂಗ್ ಅವರ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಪಾಕಿಸ್ತಾನ ಸರ್ಕಾರ ನೀಡಿದ್ದ ಹೇಳಿಕೆಯನ್ನು ಕಿರ್ಪಾಲ್ ಸಿಂಗ್ ಅವರ ಕುಟುಂಬಸ್ಥರು ಶುಕ್ರವಾರ ತಿರಸ್ಕರಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಪಾಕಿಸ್ತಾನ ಜೈಲಿನಲ್ಲಿ ಕಿರ್ಪಾಲ್ ಸಿಂಗ್ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಕಿರ್ಪಾಲ್ ಅವರ ಸಾವು ಕುರಿತಂತೆ ಹಲವು ಅನುಮಾನಗಳು ಮೂಡಿದ್ದವು. ಅಲ್ಲದೆ, ಪಾಕ್ ಅಧಿಕಾರಿಗಳೇ ಕಿರ್ಪಾಲ್ ಅವರನ್ನು ಹತ್ಯೆ ಮಾಡಿದ್ದಾರೆಂಬ ಆರೋಪಗಳು ಕೇಳಿಬಂದಿದ್ದವು. ನಂತರ ಈ ಕುರಿತಂತೆ ಸ್ಪಷ್ಟನೆ ನೀಡಿದ್ದ ಪಾಕ್, ಕಿರ್ಪಾಲ್ ಅವರು ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದರು ಎಂದು ಹೇಳಿತ್ತು.

ಇದೀಗ ಪಾಕಿಸ್ತಾನದ ಹೇಳಿಕೆಯನ್ನು ಕಿರ್ಪಾಲ್ ಸಿಂಗ್ ಅವರ ಕುಟುಂಬಸ್ಥರು ತಿರಸ್ಕರಿಸಿದ್ದು, ಕಿರ್ಪಾಲ್ ಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದರು ಎಂಬುದನ್ನು ನಾವು ಹೇಗೆ ನಂಬಲು ಸಾಧ್ಯ. ನಮಗೆ ಕಿರ್ಪಾಲ್ ಮೃತ ದೇಹ ಬೇಕು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಭಾರತೀಯ ಪ್ರಜೆಯಾಗಿರುವ (50) ಕಿರ್ಪಾಲ್ ಸಿಂಗ್ ಅವರು 1992ರಲ್ಲಿ ಪಾಕಿಸ್ತಾನದ ಒಳಗಿನ ವಾಘ ಗಡಿಯನ್ನು ದಾಟಿ ಹೋಗಿದ್ದ ಸಂದರ್ಭದಲ್ಲಿ ಅಲ್ಲಿನ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು.

ಪಂಜಾಬ್ ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರ್ಪಾಲ್ ಸಿಂಗ್ ವಿರುದ್ಧ ಆರೋಪ ಹೊರಿಸಿ ಮರಣದಂಡನೆಯನ್ನು ವಿಧಿಸಲಾಗಿತ್ತು. ಬೇಹುಗಾರಿಕೆ ಆರೋಪದಡಿ ಬಂಧನಕ್ಕೊಳಗಾಗಿದ್ದ ಕಿರ್ಪಾಲ್ ಸಿಂಗ್ ಅವರು ಕಳೆದ 20 ವರ್ಷದಿಂದ ಪಾಕಿಸ್ತಾನದ ಲಾಹೋರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.

ಕಿರ್ಪಾಲ್ ಸಿಂಗ್ ಏ.11 ರಂದು ಲಾಹೋರ್ ನ ಕಾಟ್ ಲಖ್ಪತ್ ಜೈಲಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ರಬ್ಜಿತ್ ಸಿಂಗ್ ಪ್ರಕರಣದಂತೆಯೇ ಕಿರ್ಪಾಲ್ ಸಿಂಗ್ ಪ್ರಕರಣದಲ್ಲೂ ಆಗಿದೆ. ಕಿರ್ಪಾಲ್ ರನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT