ಕೇರಳದ ಪುತ್ತಿಂಗಳ್ ದೇವಿ ದೇವಸ್ಥಾನ 
ದೇಶ

ಇನ್ನೂ ಮುಚ್ಚಿದೆ ಅಗ್ನಿದುರಂತ ನಡೆದ ಕೇರಳದ ಪುತ್ತಿಂಗಳ್ ದೇವಿ ದೇವಸ್ಥಾನ

ಕೇರಳದ ಕೊಲ್ಲಂ ಬಳಿಯಿರುವ ಪಾರವೂರ್ ಪುತ್ತಿಂಗಳ್ ದೇವಿ ದೇವಸ್ಥಾನದಲ್ಲಿ ಅಗ್ನಿ ದುರಂತ ಸಂಭವಿಸಿ ಆರು ದಿನಗಳು ಕಳೆದಿದ್ದರೂ ದೇವಾಲಯದಲ್ಲಿ ಇನ್ನೂ ಪೂಜಾ ಕಾರ್ಯಗಳು ಪ್ರಾರಂಭವಾಗಿಲ್ಲ.

ಕೊಲ್ಲಂ: ಕೇರಳದ ಕೊಲ್ಲಂ ಬಳಿಯಿರುವ ಪಾರವೂರ್ ಪುತ್ತಿಂಗಳ್ ದೇವಿ ದೇವಸ್ಥಾನದಲ್ಲಿ ಅಗ್ನಿ ದುರಂತ ಸಂಭವಿಸಿ ಆರು ದಿನಗಳು ಕಳೆದಿದ್ದರೂ ದೇವಾಲಯದಲ್ಲಿ ಇನ್ನೂ ಪೂಜಾ ಕಾರ್ಯಗಳು ಪ್ರಾರಂಭವಾಗಿಲ್ಲ.
ದೇವಾಲಯದ ದಿನನಿತ್ಯದ ಕಾರ್ಯಕ್ರಮಗಳನ್ನು ನಡೆಸುವುದರ ಬಗ್ಗೆ ಇನ್ನೂ ಗೊಂದಲಗಳಿರುವುದರಿಂದ ಪೂಜಾ ಕಾರ್ಯಗಳು ಪ್ರಾರಂಭವಾಗಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಒಂದಷ್ಟು ಜನರು ಶನಿವಾರದಿಂದೇ ದೇವಾಲಯವನ್ನು ತೆರೆಯಬೇಕೆಂದು ಒತ್ತಾಯ ಮಾಡಿದ್ದರು. ಆದರೆ ಮತ್ತೆ ಕೆಲವು ಜನರು ಶುದ್ಧೀಕರಣ ಕಾರ್ಯ ನಡೆದ ಬಳಿಕವಷ್ಟೇ ದೇವಾಲಯದಲ್ಲಿ ಪೂಜಾ ಕಾರ್ಯಗಳನ್ನು ಪ್ರಾರಂಭಿಸಬೇಕು ಎಂದು ಪಟ್ಟು ಹಿಡಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಗೊಂದಲ ಉಂಟಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಇನ್ನು ದೇವಾಲಯದ 15 ಸದಸ್ಯರ ಸಮಿತಿ ನ್ಯಾಯಾಂಗ ಬಂಧನದಲ್ಲಿರುವ ಕಾರಣಾದಿಂದಲೂ ಪೂಜಾ ಕಾರ್ಯಗಳು ಸ್ಥಗಿತಗೊಳ್ಳಲು ಕಾರಣ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!