ಅಗ್ನಿ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ 
ದೇಶ

ಕೊಲ್ಲಂ ಅಗ್ನಿ ದುರಂತ: ಮೋದಿ, ರಾಹುಲ್ ಭೇಟಿಗೆ ಆಕ್ಷೇಪಿಸಿದ್ದ ಪೊಲೀಸ್ ಮಹಾ ನಿರ್ದೇಶಕ

ಕೇರಳದಲ್ಲಿ ಅಗ್ನಿ ದುರಂತ ಸಂಭವಿಸಿದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವುದಕ್ಕೆ ಕೇರಳ ಪೋಲಿಸ್ ಮಹಾನಿರ್ದೇಶಕ ಟಿ.ಪಿ. ಸೇನ್'ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ತಿರುವನಂತಪುರಮ್: ಕೇರಳದಲ್ಲಿ ಅಗ್ನಿ ದುರಂತ ಸಂಭವಿಸಿದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವುದಕ್ಕೆ  ಕೇರಳ ಪೋಲಿಸ್ ಮಹಾನಿರ್ದೇಶಕ ಟಿ.ಪಿ. ಸೇನ್'ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.
ಪೊಲೀಸ್ ಮಹಾ ನಿರ್ದೇಶಕ ಸೇನ್ ಕುಮಾರ್ ಅವರೇ ಹೇಳಿರುವ ಮಾಹಿತಿ ಪ್ರಕಾರ ಅಗ್ನಿ ದುರಂತ ಸಂಭವಿಸಿದ ಪ್ರದೇಶದಲ್ಲಿ ನಡೆಯುತ್ತಿದ್ದ ರಕ್ಷಣಾ ಕಾರ್ಯಾಚರಣೆಗೆ ಪೊಲೀಸ್ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಅಥವಾ ಇನ್ನಿತರ ವಿವಿಐಪಿ ಗಳಿಗೆ ಹೆಚ್ಚಿನ ಭದ್ರತೆ ಒದಗಿಸುವುದು ಕಷ್ಟ ಸಾಧ್ಯವಾಗಿತ್ತು. ಆದ್ದರಿಂದ ಪ್ರಧಾನಿ ಮೋದಿ ಅವರ ಭೇಟಿಯನ್ನು ಮುಂದೂಡುವಂತೆ ಸಲಹೆ ನೀಡಿದ್ದರು ಎಂದು ತಿಳಿದುಬಂದಿದೆ.
ಸೇನ್ ಕುಮಾರ್ ಅವರ ಸಲಹೆಯಂತೆ ಡಿಜಿಪಿ, ಪ್ರಧಾನಿ ಮೋದಿ ಅವರ ಭೇಟಿಯನ್ನು ಒಂದು ದಿನ ಮುಂದೂಡುವಂತೆ ಎಸ್ ಪಿಜಿ ಗೆ ಮನವಿ ಮಾಡಿದ್ದರು, ಆದರೆ ಡಿಜಿಪಿಯ ಮನವಿಯನ್ನು ನಿರಾಕರಿಸಿದ ಎಸ್ ಪಿಜಿ ತಂಡ ಪ್ರಧಾನಿ ನರೇಂದ್ರ ಮೋದಿ ಅವರು ಅಂದೇ ಭೇಟಿ ನೀಡಲು ನಿರ್ಧರಿಸಿದ್ದಾರೆಂದು ಕಾರಣ ನೀಡಿತ್ತು ಎಂದು ತಿಳಿದುಬಂದಿದೆ.  ಕೇವಲ ಮೋದಿ ಅವರ ಭೇಟಿಯನ್ನು ಮಾತ್ರವಲ್ಲದೇ, ರಾಹುಲ್ ಗಾಂಧಿ ಅವರ ಭೆಟಿಗೂ ಸೇನ್ ಕುಮಾರ್  ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.
ಅಗ್ನಿ ದುರಂತವನ್ನು ತಡೆಗಟ್ಟಲು ವಿಫಲರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ  ಸೂಚಿಸಿದ್ದ ತಮ್ಮ ಶಿಫಾರಸ್ಸನ್ನು ಸರಿಯಾಗಿ ಕಾರ್ಯಗತಗೊಳಿಸಿಲ್ಲ ಎಂದು ಗೃಹ ಇಲಾಖೆ ಕಾರ್ಯದರ್ಶಿ ನಳಿನಿ ನೆಟ್ಟೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!