ನು ಜನತಾ ದಳ (ಸಂಯುಕ್ತ) ಮಾಜಿ ಮುಖ್ಯಸ್ಥ ಶರದ್ ಯಾದವ್ 
ದೇಶ

ಎಲ್'ಟಿಸಿ ಹಗರಣ: ನ್ಯಾಯಸಮ್ಮತವಲ್ಲದ ನಡವಳಿಕೆಯನ್ನು ಜೆಡಿ(ಯು) ಸಹಿಸಲ್ಲ- ಶರದ್ ಯಾದವ್

ರಜೆ ಮತ್ತು ಪ್ರಯಾಣ ಭತ್ಯೆ ವಿನಾಯಿತಿ (ಎಲ್'ಟಿಸಿ) ಹಗರಣದಲ್ಲಿ ಸಿಲುಕಿರುವ ರಾಜ್ಯಸಭೆ ಸಂಸದ ಅನಿಲ್ ಕುಮಾರ್ ಸಹಾನಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಮೀದ್ ಅನ್ಸಾರಿಯವರು ಸಿಬಿಐಗೆ ನೀಡಿರುವ ಸೂಚನೆಯನ್ನು ಜನತಾ ದಳ (ಸಂಯುಕ್ತ) ಮಾಜಿ ಮುಖ್ಯಸ್ಥ ಶರದ್ ಯಾದವ್...

ನವದೆಹಲಿ: ರಜೆ ಮತ್ತು ಪ್ರಯಾಣ ಭತ್ಯೆ ವಿನಾಯಿತಿ (ಎಲ್'ಟಿಸಿ) ಹಗರಣದಲ್ಲಿ ಸಿಲುಕಿರುವ ರಾಜ್ಯಸಭೆ ಸಂಸದ ಅನಿಲ್ ಕುಮಾರ್ ಸಹಾನಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಮೀದ್ ಅನ್ಸಾರಿಯವರು ಸಿಬಿಐಗೆ ನೀಡಿರುವ ಸೂಚನೆಯನ್ನು ಜನತಾ ದಳ (ಸಂಯುಕ್ತ) ಮಾಜಿ ಮುಖ್ಯಸ್ಥ ಶರದ್ ಯಾದವ್ ಅವರು ಶುಕ್ರವಾರ ಸ್ವಾಗತಿಸಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣ ಸಂಬಂಧ ನನಗೆ ಅರಿವಿಲ್ಲ. ಆದರೆ, ನ್ಯಾಯಸಮ್ಮತವಲ್ಲದ ನಡವಳಿಕೆಯನ್ನು ಪಕ್ಷ ಎಂದಿಗೂ ಸಹಿಸುವುದಿಲ್ಲ. ಈ ಬಗ್ಗೆ ಪಕ್ಷ ಮಾಹಿತಿಯನ್ನು ಕಲೆ ಹಾಕಲಿದೆ ಎಂದು ಹೇಳಿದ್ದಾರೆ.

ಕೋಲ್ಕತಾದ ವಿಮಾನ ನಿಲ್ದಾಣದ ಬಳಿ 600 ಬ್ಲಾಂಕ್ ಬೋರ್ಡಿಂಗ್ ಪಾಸ್ ಗಳನ್ನು ಮಾರುತ್ತಿದ್ದ ವ್ಯಕ್ತಿಯನ್ನು 2014ರ ಮಾರ್ಚ್ ತಿಂಗಳಿನಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ 2013ರಲ್ಲಿ ದಾಖಲಿಸಿದ್ದ ಮೊದಲ ಎಫ್ಐಆರ್ ನಲ್ಲಿ ನಕಲಿ ಟಿಕೆಟ್ ಮತ್ತು ಬೋರ್ಡಿಂಗ್ ಪಾಸ್ ನೀಡಿ ರು. 9.5 ಲಕ್ಷ ವಂಚನೆ ಎಸಗಿರುವ ಆರೋಪವನ್ನು ಜೆಡಿಯು ರಾಜ್ಯಸಭೆ ಸಂದಸ ಅನಿಲ್ ಕುಮಾರ್ ಸಹಾನಿ ವಿರುದ್ದ ಹೊರಿಸಲಾಗಿತ್ತು.

ಅಲ್ಲದೆ, ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾದ ಗ್ರಾಹಕ ಸೇವಾ ವಿಭಾಗದ ಏಜೆಂಟ್ ರುಬಾಯಿನಾ ಅಖ್ತರ್, ಲಜಪತ್ ನಗರ ಮೂಲದ ಟ್ರಾವೆಲ್ ಅಪರೇಟ್ ಏರ್ ಕ್ರ್ಯೂಸ್ ಟ್ರಾವೆಲ್ಸ್ ಲಿಮಿಟೆಡ್ ಸಂಸ್ಥೆಗಳ ಮೇಲೂ ಪ್ರಕರಣ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT