ನು ಜನತಾ ದಳ (ಸಂಯುಕ್ತ) ಮಾಜಿ ಮುಖ್ಯಸ್ಥ ಶರದ್ ಯಾದವ್ 
ದೇಶ

ಎಲ್'ಟಿಸಿ ಹಗರಣ: ನ್ಯಾಯಸಮ್ಮತವಲ್ಲದ ನಡವಳಿಕೆಯನ್ನು ಜೆಡಿ(ಯು) ಸಹಿಸಲ್ಲ- ಶರದ್ ಯಾದವ್

ರಜೆ ಮತ್ತು ಪ್ರಯಾಣ ಭತ್ಯೆ ವಿನಾಯಿತಿ (ಎಲ್'ಟಿಸಿ) ಹಗರಣದಲ್ಲಿ ಸಿಲುಕಿರುವ ರಾಜ್ಯಸಭೆ ಸಂಸದ ಅನಿಲ್ ಕುಮಾರ್ ಸಹಾನಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಮೀದ್ ಅನ್ಸಾರಿಯವರು ಸಿಬಿಐಗೆ ನೀಡಿರುವ ಸೂಚನೆಯನ್ನು ಜನತಾ ದಳ (ಸಂಯುಕ್ತ) ಮಾಜಿ ಮುಖ್ಯಸ್ಥ ಶರದ್ ಯಾದವ್...

ನವದೆಹಲಿ: ರಜೆ ಮತ್ತು ಪ್ರಯಾಣ ಭತ್ಯೆ ವಿನಾಯಿತಿ (ಎಲ್'ಟಿಸಿ) ಹಗರಣದಲ್ಲಿ ಸಿಲುಕಿರುವ ರಾಜ್ಯಸಭೆ ಸಂಸದ ಅನಿಲ್ ಕುಮಾರ್ ಸಹಾನಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಮೀದ್ ಅನ್ಸಾರಿಯವರು ಸಿಬಿಐಗೆ ನೀಡಿರುವ ಸೂಚನೆಯನ್ನು ಜನತಾ ದಳ (ಸಂಯುಕ್ತ) ಮಾಜಿ ಮುಖ್ಯಸ್ಥ ಶರದ್ ಯಾದವ್ ಅವರು ಶುಕ್ರವಾರ ಸ್ವಾಗತಿಸಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣ ಸಂಬಂಧ ನನಗೆ ಅರಿವಿಲ್ಲ. ಆದರೆ, ನ್ಯಾಯಸಮ್ಮತವಲ್ಲದ ನಡವಳಿಕೆಯನ್ನು ಪಕ್ಷ ಎಂದಿಗೂ ಸಹಿಸುವುದಿಲ್ಲ. ಈ ಬಗ್ಗೆ ಪಕ್ಷ ಮಾಹಿತಿಯನ್ನು ಕಲೆ ಹಾಕಲಿದೆ ಎಂದು ಹೇಳಿದ್ದಾರೆ.

ಕೋಲ್ಕತಾದ ವಿಮಾನ ನಿಲ್ದಾಣದ ಬಳಿ 600 ಬ್ಲಾಂಕ್ ಬೋರ್ಡಿಂಗ್ ಪಾಸ್ ಗಳನ್ನು ಮಾರುತ್ತಿದ್ದ ವ್ಯಕ್ತಿಯನ್ನು 2014ರ ಮಾರ್ಚ್ ತಿಂಗಳಿನಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ 2013ರಲ್ಲಿ ದಾಖಲಿಸಿದ್ದ ಮೊದಲ ಎಫ್ಐಆರ್ ನಲ್ಲಿ ನಕಲಿ ಟಿಕೆಟ್ ಮತ್ತು ಬೋರ್ಡಿಂಗ್ ಪಾಸ್ ನೀಡಿ ರು. 9.5 ಲಕ್ಷ ವಂಚನೆ ಎಸಗಿರುವ ಆರೋಪವನ್ನು ಜೆಡಿಯು ರಾಜ್ಯಸಭೆ ಸಂದಸ ಅನಿಲ್ ಕುಮಾರ್ ಸಹಾನಿ ವಿರುದ್ದ ಹೊರಿಸಲಾಗಿತ್ತು.

ಅಲ್ಲದೆ, ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾದ ಗ್ರಾಹಕ ಸೇವಾ ವಿಭಾಗದ ಏಜೆಂಟ್ ರುಬಾಯಿನಾ ಅಖ್ತರ್, ಲಜಪತ್ ನಗರ ಮೂಲದ ಟ್ರಾವೆಲ್ ಅಪರೇಟ್ ಏರ್ ಕ್ರ್ಯೂಸ್ ಟ್ರಾವೆಲ್ಸ್ ಲಿಮಿಟೆಡ್ ಸಂಸ್ಥೆಗಳ ಮೇಲೂ ಪ್ರಕರಣ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಹೃದಯ ಛಿದ್ರವಾಗಿದೆ: ಆಫ್ರಿಕಾ ವಿರುದ್ಧದ ಸರಣಿ ಹೀನಾಯ ಸೋಲಿನ ನಂತರ ಇಡೀ ದೇಶದ ಕ್ಷಮೆಯಾಚಿಸಿದ ರಿಷಭ್ ಪಂತ್!

WPL Auction 2026: ಬರೋಬ್ಬರಿ 3.2 ಕೋಟಿ ರೂ. ಗೆ ಆಲ್ ರೌಂಡರ್ ದೀಪ್ತಿ ಶರ್ಮಾ ಸೋಲ್ಡೌಟ್‌! ಸ್ಟನ್ ಆದ ಗಂಗೂಲಿ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

SCROLL FOR NEXT