ಬಿಜೆಪಿ ನಾಯಕ ವಿಜಯ್ ಗೋಯೆಲ್ (ಸಂಗ್ರಹ ಚಿತ್ರ) 
ದೇಶ

ಸಮ-ಬೆಸ ಹೆಸರಿನಲ್ಲಿ ದೆಹಲಿಯನ್ನು ಲೂಟಿ ಮಾಡುತ್ತಿದ್ದಾರೆ ಕೇಜ್ರಿವಾಲ್: ಬಿಜೆಪಿ

ಸಂಚಾರ ದಟ್ಟಣೆಯನ್ನು ನಿಯಂತ್ರಣ ಮಾಡುತ್ತೇವೆಂದು ಸಮ-ಬೆಸ ಯೋಜನೆ ಹೆಸರಿನಲ್ಲಿ ಅನಗತ್ಯ ಜಾಹೀರಾತುಗಳನ್ನು ನೀಡುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್...

ನವದೆಹಲಿ: ಸಂಚಾರ ದಟ್ಟಣೆಯನ್ನು ನಿಯಂತ್ರಣ ಮಾಡುತ್ತೇವೆಂದು ಸಮ-ಬೆಸ ಯೋಜನೆ ಹೆಸರಿನಲ್ಲಿ ಅನಗತ್ಯ ಜಾಹೀರಾತುಗಳನ್ನು ನೀಡುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಜಧಾನಿ ದೆಹಲಿಯನ್ನು ಲೂಟಿ ಮಾಡುತ್ತಿದ್ದಾರೆಂದು ಬಿಜೆಪಿ ಶನಿವಾರ ಆರೋಪ ವ್ಯಕ್ತಪಡಿಸಿದೆ.

ನಿನ್ನೆಯಷ್ಟೇ ಕೇಜ್ರಿವಾಲ್ ಅವರು, ಆಮ್ ಆದ್ಮಿ ಪಕ್ಷ ಜಾರಿಗೆ ತಂದಿರುವ ಸಮ-ಬೆಸ ನಿಯಮವನ್ನು ವಿಫಲವಾಗಬೇಕೆಂದು ಬಿಜೆಪಿ ಬಯಸುತ್ತಿದೆ ಎಂದು ಆರೋಪಿಸಿದ್ದರು.

ಈ ಆರೋಪ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ವಿಜಯ್ ಗೋಯೆಲ್ ಅವರು, ಕೇಜ್ರಿವಾಲ್ ನೇತೃತ್ವದ ಸರ್ಕಾರ ತಾವು ಜಾರಿಗೆ ತಂದಿರುವ ಯೋಜನೆಗಿಂತಲೂ ಅದರ ಜಾಹೀರಾತಿನ ಬಗ್ಗೆಯೇ ಹೆಚ್ಚು ಗಮನ ಹರಿಸುತ್ತಿದೆ. ಕೇವಲ ರಸ್ತೆಗಳು, ರೇಡಿಯೋ, ಟಿವಿ ಹಾಗೂ ದಿನಪತ್ರಿಕೆಗಳ ಜಾಹೀರಾತುಗಳಿಗಾಗಿಯೇ ಅವರು ಕೋಟಿಗಟ್ಟಲೆ ಹಣವನ್ನು ವ್ಯಯ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ದೆಹಲಿ ಸರ್ಕಾರ ಜನರ ಹಣವನ್ನು ದುರ್ಬಳಕೆ ಮಾಡಿಕೊಳ್ಳಿತ್ತಿದೆ. ಕೇಜ್ರಿವಾಲ್ ಅವರು ಸಂಚಾರಿ ನಿಯಮ ಹಾಗೂ ಮಾಲಿನ್ಯದ ಕಡೆ ಗಮನ ಹರಿಸುತ್ತಿದ್ದು, ಸಮ-ಬೆಸ ಎಂದು ಹೇಳಿ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಇದೀಗ ಅಧಿಕಾರದಲ್ಲಿರುವ ಸರ್ಕಾರ ಯಾವುದೇ ತಯಾರಿ ಇಲ್ಲದೆಯೇ ರಸ್ತೆಗಿಳಿಯುತ್ತಿದೆ. ನಿಜಕ್ಕೂ ಸಮ-ಬೆಸ ಯಶಸ್ವಿಯಾಗಿರುವುದೇ ಆದರೆ, ಯೋಜನೆಯನ್ನು ಶಾಶ್ವತವಾಗಿ ಏಕೆ ಜಾರಿಗೆ ತರುತ್ತಿಲ್ಲ. ಸಮ-ಬೆಸ ಯೋಜನೆ ಹೆಸರಿನಲ್ಲಿ ಕೇಜ್ರಿವಾಲ್ ಅವರು ಆಟವಾಡುತ್ತಿದ್ದು, ಜಾಹೀರಾತು ಉದ್ದೇಶಕ್ಕಾಗಿ ಮಾತ್ರ 15 ದಿನಕ್ಕೊಮ್ಮೆ ಯೋಜನೆಯನ್ನು ಜಾರಿಗೆ ತರುತ್ತಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT