ಬಿಜೆಪಿ ನಾಯಕ ವಿಜಯ್ ಗೋಯೆಲ್ (ಸಂಗ್ರಹ ಚಿತ್ರ) 
ದೇಶ

ಸಮ-ಬೆಸ ಹೆಸರಿನಲ್ಲಿ ದೆಹಲಿಯನ್ನು ಲೂಟಿ ಮಾಡುತ್ತಿದ್ದಾರೆ ಕೇಜ್ರಿವಾಲ್: ಬಿಜೆಪಿ

ಸಂಚಾರ ದಟ್ಟಣೆಯನ್ನು ನಿಯಂತ್ರಣ ಮಾಡುತ್ತೇವೆಂದು ಸಮ-ಬೆಸ ಯೋಜನೆ ಹೆಸರಿನಲ್ಲಿ ಅನಗತ್ಯ ಜಾಹೀರಾತುಗಳನ್ನು ನೀಡುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್...

ನವದೆಹಲಿ: ಸಂಚಾರ ದಟ್ಟಣೆಯನ್ನು ನಿಯಂತ್ರಣ ಮಾಡುತ್ತೇವೆಂದು ಸಮ-ಬೆಸ ಯೋಜನೆ ಹೆಸರಿನಲ್ಲಿ ಅನಗತ್ಯ ಜಾಹೀರಾತುಗಳನ್ನು ನೀಡುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಜಧಾನಿ ದೆಹಲಿಯನ್ನು ಲೂಟಿ ಮಾಡುತ್ತಿದ್ದಾರೆಂದು ಬಿಜೆಪಿ ಶನಿವಾರ ಆರೋಪ ವ್ಯಕ್ತಪಡಿಸಿದೆ.

ನಿನ್ನೆಯಷ್ಟೇ ಕೇಜ್ರಿವಾಲ್ ಅವರು, ಆಮ್ ಆದ್ಮಿ ಪಕ್ಷ ಜಾರಿಗೆ ತಂದಿರುವ ಸಮ-ಬೆಸ ನಿಯಮವನ್ನು ವಿಫಲವಾಗಬೇಕೆಂದು ಬಿಜೆಪಿ ಬಯಸುತ್ತಿದೆ ಎಂದು ಆರೋಪಿಸಿದ್ದರು.

ಈ ಆರೋಪ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ವಿಜಯ್ ಗೋಯೆಲ್ ಅವರು, ಕೇಜ್ರಿವಾಲ್ ನೇತೃತ್ವದ ಸರ್ಕಾರ ತಾವು ಜಾರಿಗೆ ತಂದಿರುವ ಯೋಜನೆಗಿಂತಲೂ ಅದರ ಜಾಹೀರಾತಿನ ಬಗ್ಗೆಯೇ ಹೆಚ್ಚು ಗಮನ ಹರಿಸುತ್ತಿದೆ. ಕೇವಲ ರಸ್ತೆಗಳು, ರೇಡಿಯೋ, ಟಿವಿ ಹಾಗೂ ದಿನಪತ್ರಿಕೆಗಳ ಜಾಹೀರಾತುಗಳಿಗಾಗಿಯೇ ಅವರು ಕೋಟಿಗಟ್ಟಲೆ ಹಣವನ್ನು ವ್ಯಯ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ದೆಹಲಿ ಸರ್ಕಾರ ಜನರ ಹಣವನ್ನು ದುರ್ಬಳಕೆ ಮಾಡಿಕೊಳ್ಳಿತ್ತಿದೆ. ಕೇಜ್ರಿವಾಲ್ ಅವರು ಸಂಚಾರಿ ನಿಯಮ ಹಾಗೂ ಮಾಲಿನ್ಯದ ಕಡೆ ಗಮನ ಹರಿಸುತ್ತಿದ್ದು, ಸಮ-ಬೆಸ ಎಂದು ಹೇಳಿ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಇದೀಗ ಅಧಿಕಾರದಲ್ಲಿರುವ ಸರ್ಕಾರ ಯಾವುದೇ ತಯಾರಿ ಇಲ್ಲದೆಯೇ ರಸ್ತೆಗಿಳಿಯುತ್ತಿದೆ. ನಿಜಕ್ಕೂ ಸಮ-ಬೆಸ ಯಶಸ್ವಿಯಾಗಿರುವುದೇ ಆದರೆ, ಯೋಜನೆಯನ್ನು ಶಾಶ್ವತವಾಗಿ ಏಕೆ ಜಾರಿಗೆ ತರುತ್ತಿಲ್ಲ. ಸಮ-ಬೆಸ ಯೋಜನೆ ಹೆಸರಿನಲ್ಲಿ ಕೇಜ್ರಿವಾಲ್ ಅವರು ಆಟವಾಡುತ್ತಿದ್ದು, ಜಾಹೀರಾತು ಉದ್ದೇಶಕ್ಕಾಗಿ ಮಾತ್ರ 15 ದಿನಕ್ಕೊಮ್ಮೆ ಯೋಜನೆಯನ್ನು ಜಾರಿಗೆ ತರುತ್ತಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT