ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ಪ್ರಧಾನಿಯಾಗುವ ಕನಸಿಗೆ ಬೆಂಬಲ ನೀಡದ ಕಾರಣ ಸೋನಿಯಾ ಮುಲಾಯಂ ವಿರುದ್ದವಾಗಿದ್ದಾರೆ: ಸ್ವಾಮಿ

ದೇಶದ ಪ್ರಧಾನಮಂತ್ರಿಯಾಗುವ ತಮ್ಮ ಕನಸಿಗೆ ಮುಲಾಯಂ ಸಿಂಗ್ ಅವರು ಬೆಂಬಲ ನೀಡದ ಕಾರಣ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾಗಾಂಧಿಯವರು ಮುಲಾಯಂ ಸಿಂಗ್ ವಿರುದ್ಧ...

ನವದೆಹಲಿ; ದೇಶದ ಪ್ರಧಾನಮಂತ್ರಿಯಾಗುವ ತಮ್ಮ ಕನಸಿಗೆ ಮುಲಾಯಂ ಸಿಂಗ್ ಅವರು ಬೆಂಬಲ ನೀಡದ ಕಾರಣ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾಗಾಂಧಿಯವರು ಮುಲಾಯಂ ಸಿಂಗ್ ವಿರುದ್ಧ ಕಿಡಿಕಾರುತ್ತಿದ್ದಾರೆಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

ನಿನ್ನೆಯಷ್ಟೇ ಮಾಧ್ಯಮಗಳೊಂದಿಗೆ ಮಾತನಾಡಿ ದೊಡ್ಡ ಬಾಂಬ್ ವೊಂದನ್ನು ಸಿಡಿಸಿದ್ದ ಹಂಸರಾಜ್ ಭಾರಧ್ವಾಜ್ ಅವರು ಸಮಾಜವಾದಿ ಪಕ್ಷದ ಪರಮೋಚ್ಛ ನಾಯಕರಾಗಿರುವ ಮುಲಾಂಯ್ ಸಿಂದ್ ಯಾದವ್ 2007ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಅವರ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಲು ಮೊದಲ ಅವಧಿಯ ಯುಪಿಎ ಸರ್ಕಾರ ಆಲೋಚನೆ ನಡೆಸಿತ್ತು. ಆದರೆ, ಈ ವಿಚಾರದಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ದ್ವಂದ್ವ ಮನಸ್ಥಿಯಲ್ಲಿದ್ದ ಕಾರಣ ಇದು ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದರು.

ಈ ಹೇಳಿಕೆ ಕುರಿತಂತೆ ಮಾತನಾಡಿರುವ ಸ್ವಾಮಿ ಅವರು, 1999ರಿಂದಲೂ ಮುಲಾಯಂ ಸಿಂಗ್ ಅವರು ಪ್ರಧಾನಮಂತ್ರಿಯಾಗಬೇಕೆಂಬ ಸೋನಿಯಾ ಅವರ ಆಸೆಗೆ ಬೆಂಬಲ ವ್ಯಕ್ತ ನೀಡಿಲ್ಲ. ಸೋನಿಯಾ ಗಾಂಧಿಯವರಿಗೆ ಮುಲಾಂಸಿಂಗ್ ಅವರನ್ನು ಯಾವಾಗಲೂ ಅನುಮಾನದಿಂದಲೇ ನೋಡುತ್ತಿದ್ದರು. ಸೋನಿಯಾ ಮುಲಾಯಂ ಅವರನ್ನು ದ್ವೇಷಿಸುತ್ತಿದ್ದರು ಎಂಬ ವಿಚಾರ ನನಗೆ ಆಶ್ಚರ್ಯವೇನು ತಂದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!