ಗುರುದ್ವಾರ 
ದೇಶ

ಪಶ್ಚಿಮ ಜರ್ಮನಿಯ ಗುರುದ್ವಾರದಲ್ಲಿ ಸ್ಫೋಟ: ಭಾರತ ಕಳವಳ

ಶನಿವಾರ ಸಂಜೆ ಜರ್ಮನಿಯ ಎಸ್ಸೆನ್ ನಗರದ ಗುರುದ್ವಾರದಲ್ಲಿ ಸಂಭವಿಸಿದ ಸ್ಫೋಟ ಸಂಬಂಧ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ...

ಬರ್ಲಿನ್: ಶನಿವಾರ ಸಂಜೆ ಜರ್ಮನಿಯ ಎಸ್ಸೆನ್ ನಗರದ ಗುರುದ್ವಾರದಲ್ಲಿ ಸಂಭವಿಸಿದ ಸ್ಫೋಟ ಸಂಬಂಧ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.

ಗುರುದ್ವಾರದಲ್ಲಿ ಸ್ಫೋಟ ಸಂಭವಿಸಿರುವುದು ಕೇಳಿ ಆತಂಕವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.

ಘಟನೆ ಕುರಿತಂತೆ ಜರ್ಮನಿಯಲ್ಲಿನ ನಮ್ಮ ರಾಜತಾಂತ್ರಿಕ ಕಚೇರಿಯು ಪರಿಸ್ಥಿತಿ ಬಗ್ಗೆ ನಿಗಾ ಇಟ್ಟಿದ್ದು ಸ್ಥಳೀಯ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದಾರೆ. ಇನ್ನು ಸ್ಫೋಟದಲ್ಲಿ ಗಾಯಗೊಂಡವರು ಯಾರು ಯಾವ ದೇಶದವರು ಎಂದು ತಿಳಿದುಬಂದಿಲ್ಲ ಎಂದು ಸ್ವರೂಪ್ ಹೇಳಿದ್ದಾರೆ.

ಗುರುದ್ವಾರದಲ್ಲಿ ವಿವಾಹ ಸಮಾರಂಭ ನಡೆಯುತ್ತಿದ್ದ ಗುರುದ್ವಾರದ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಸ್ಫೋಟಕ ಎಸೆದ ಪರಿಣಾಮ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಜರ್ಮನಿಯಲ್ಲಿ ನಡೆದಿದೆ.

ಗುರುದ್ವಾರದಲ್ಲಿ ವಿವಾಹ ಸಮಾರಂಭ ನಡೆಯುತ್ತಿತ್ತು. ಹಾಗಾಗಿ ಸಾಕಷ್ಟು ಜನರು ನೆರೆದಿದ್ದರು. ಈ ಸಂದರ್ಭದಲ್ಲಿ ಮುಸುಕುಧಾರಿ ವ್ಯಕ್ತಿಯೊಬ್ಬ ಜನರ ಮೇಲೆ ಸ್ಫೋಟಕ ಎಸೆದು ಪರಾರಿಯಾಗಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT