ಶಾನವಾಜ್ ಹುಸೇನ್ 
ದೇಶ

ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡುವುದಕ್ಕೂ ಮುನ್ನ ನಿತೀಶ್ ಜೆಡಿಯು ಪಕ್ಷವನ್ನು ಬಲಗೊಳಿಸಲಿ: ಬಿಜೆಪಿ

ಬಿಜೆಪಿ, ಆರ್ ಎಸ್ ಎಸ್ ಮುಕ್ತ ಭಾರತಕ್ಕೆ ಕರೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಿತೀಶ್ ಕುಮಾರ್ ಹಗಲುಕನಸು ಕಾಣುತ್ತಿದ್ದಾರೆ ಎಂದು ಹೇಳಿದೆ.

ನವದೆಹಲಿ: ಬಿಜೆಪಿ, ಆರ್ ಎಸ್ ಎಸ್ ಮುಕ್ತ ಭಾರತಕ್ಕೆ ಕರೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಿತೀಶ್ ಕುಮಾರ್ ಹಗಲುಕನಸು ಕಾಣುತ್ತಿದ್ದಾರೆ ಎಂದು ಹೇಳಿದೆ.
17 ವರ್ಷಗಳ ಹಿಂದೆ ಬಿಜೆಪಿಯ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದ್ದ ನಿತೀಶ್ ಕುಮಾರ್ ಗೆ ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡುವ ಅರ್ಹತೆ ಏನಿದೆ ಎಂದು ಬಿಜೆಪಿ ವಕ್ತಾರ ಶಾನವಾಜ್ ಹುಸೇನ್ ಪ್ರಶ್ನಿಸಿದ್ದಾರೆ. ಹತಾಶಗೊಂಡಿರುವ ಜೆಡಿಯು ನಾಯಕ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಹಾರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಕ್ಕೂ ಸಾಧ್ಯವಾಗದ ಪ್ರಾದೇಶಿಕ ಪಕ್ಷದ ನಾಯಕರಾಗಿರುವ ನಿತೀಶ್ ಕುಮಾರ್, ರಾಷ್ಟ್ರೀಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುವ ಕನಸು ಕಾಣುತ್ತಿದ್ದಾರೆ. ಆದರೆ ಅದು ಎಂದಿಗೂ ನನಸಾಗುವುದಿಲ್ಲ ಎಂದು ಹುಸೇನ್ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡುವುದಕ್ಕೂ ಮುನ್ನ ನಿತೀಶ್ ಕುಮಾರ್ ಜನತಾದಳವನ್ನು ರಾಷ್ಟ್ರಮಟ್ಟದಲ್ಲಿ ಬಲಗೊಳಿಸಲಿ ಎಂದು ಶಾನವಾಜ್ ಹುಸೇನ್ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT