ಕಿಕ್ಕಿರಿದ ಬಸ್ ಗೆ ವಿಮೆ ನಿರಾಕರಣೆ 
ದೇಶ

ಕಿಕ್ಕಿರಿದ ಬಸ್ ಗೆ ವಿಮೆ ನಿರಾಕರಣೆ

ಬಸ್ ಗಳಲ್ಲಿ ಹೆಚ್ಚು ಜನರನ್ನು ತುಂಬಿಸುವವರಿಗೆ ಎಚ್ಚರಿಕೆ ಗಂಟೆ ಎಂಬಂತೆ ರಾಷ್ಟ್ರೀಯ ಗ್ರಾಹಕ ಆಯೋಗ ಬಸ್ ವೊಂದರ 13 ಲಕ್ಷ ರೂ ಮೌಲ್ಯದ ವಿಮೆ ಹಕ್ಕನ್ನು ತಿರಸ್ಕರಿಸಿದೆ.

ನವದೆಹಲಿ: ಬಸ್ ಗಳಲ್ಲಿ ಹೆಚ್ಚು ಜನರನ್ನು ತುಂಬಿಸುವವರಿಗೆ ಎಚ್ಚರಿಕೆ ಗಂಟೆ ಎಂಬಂತೆ ರಾಷ್ಟ್ರೀಯ ಗ್ರಾಹಕ ಆಯೋಗ ಬಸ್ ವೊಂದರ 13 ಲಕ್ಷ ರೂ ಮೌಲ್ಯದ ವಿಮೆ ಹಕ್ಕನ್ನು ತಿರಸ್ಕರಿಸಿದೆ.
2008 ರಲ್ಲಿ ನಡೆದ ಬಸ್ ಅಪಘಾತ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಜಿತ್ ಭಾರಿಹೋಕೆ, ರೇಖಾ ಗುಪ್ತಾ, ಬಸ್ ಗಳಲ್ಲಿ ಹೆಚ್ಚು ಜನರನ್ನು ತುಂಬುವುದರಿಂದ ಅಪಘಾತದ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ದುಬೆ ಟ್ರಾವಲ್ಸ್ ನ ಬಸ್ ವೊಂದು 2008 ರಲ್ಲಿ ಅಪಘಾತಕ್ಕೀಡಾಗಿತ್ತು, ಈ ಅಪಘಾತದಲ್ಲಿ 8 ಪ್ರಯಾಣಿಕರು ಮೃತಪಟ್ಟಿದ್ದರು. ಆರ್ ಟಿ ಒ ನಿಯಮಗಳನ್ನು ಉಲ್ಲಂಘಿಸಿ 35 ಜನರ ಬದಲಿಗೆ 77 ಜನರನ್ನು ತುಂಬಿಸಿದ್ದ ಕಾರಣ ಬಸ್ ಗೆ ವಿಮೆ ಹಕ್ಕನ್ನು ನಿರಾಕರಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಜಿತ್ ಭಾರಿಹೋಕೆ, ರೇಖಾ ಗುಪ್ತಾ, ಬಸ್ ಗೆ ವಿಮೆಯ ಹಣವನ್ನು ನೀಡಲು ನಿರಕಾರಿಸಿದ್ದಾರೆ. ವಿಮೆ ಹಣವನ್ನು ನಿರಾಕರಿಸಿರುವುದಷ್ಟೇ ಅಲ್ಲದೇ ನಿಯಮ ಉಲ್ಲಂಘಿಸಿ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ದ ಕಾರಣ 50,000 ರೂ ದಂಡ ವಿಧಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT