ಪುತ್ತಿಂಗಳ್ ದೇವಿ ದೇವಸ್ಥಾನ, ಕೇರಳ 
ದೇಶ

ಅಗ್ನಿ ದುರಂತ ಸಂಭವಿಸಿದ ವಾರದ ನಂತರ ಬಾಗಿಲು ತೆರೆದ ಪುತ್ತಿಂಗಳ್ ದೇವಿ ದೇಗುಲ

ಅಗ್ನಿ ದುರಂತ ಸಂಭವಿಸಿದ ಆರು ದಿನಗಳ ನಂತರ ಕೇರಳದ ಕೊಲ್ಲಂ ಬಳಿಯಿರುವ ಪಾರವೂರ್ ಪುತ್ತಿಂಗಳ್ ದೇವಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ.

ಕೊಲ್ಲಂ: ಅಗ್ನಿ ದುರಂತ ಸಂಭವಿಸಿದ ಆರು ದಿನಗಳ ನಂತರ ಕೇರಳದ ಕೊಲ್ಲಂ ಬಳಿಯಿರುವ ಪಾರವೂರ್ ಪುತ್ತಿಂಗಳ್ ದೇವಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ.
ದೇವಾಲಯದ ಮುಖ್ಯ ಅರ್ಚಕ ಉನ್ನಿಕೃಷ್ಣನ್ ನಂಬೂದರಿ ಬೆಳಿಗ್ಗೆ 4 ಕ್ಕೆ ದೇವಾಲಯದ ಗರ್ಭಗುಡಿಯನ್ನು ತೆರೆದರು ಈ ನೂರಾರು ಭಕ್ತಾದಿಗಳು ನೆರೆದಿದ್ದರು. ಅಗ್ನಿ ದುರಂತ ಸಂಭವಿಸಿ 4 -5 ದಿನಗಳೇ ಕಳೆದರೂ ದೇವಾಲಯದ ಬಾಗಿಲನ್ನು ತೆರೆದಿರಲಿಲ್ಲ. ಆದರೆ ಪಟಾಕಿ ಹೊಡೆಯುವ ಆಚರಣೆಯ ನಂತರ ಏಳನೇ ದಿನವೇ ದೇವಾಲಯವನ್ನು ತೆರೆಯುವುದು  ಸಂಪ್ರದಾಯ ಆಗಿರುವುದರಿಂದ ಪಟಾಕಿ ಹೊಡೆಯುವ ಆಚರಣೆ ನಡೆದು 7 ದಿನಗಳ ನಂತರ ದೇವಾಲಯವನ್ನು ತೆರೆಯಲಾಗಿದೆ.
ಅಗ್ನಿ ದುರಂತ ಸಂಭವಿಸಿದ ನಂತರ 7 ನೇ ದಿನ ದೇವಾಲಯದ ಬಾಗಿಲನ್ನು ತೆರೆಯುವುದರ ಬಗ್ಗೆ ಸಾಕಷ್ಟು ಗೊಂದಲಗಳಿತ್ತಾದರೂ, ದೇವಾಲಯದ ಬಾಗಿಲನ್ನು ತೆರೆಯಲು ಆಡಳಿತ ಮಂಡಳಿ ಒಮ್ಮತದ ತೀರ್ಮಾನ ಕೈಗೊಂಡ ಪರಿಣಾಮ ಇಂದು ದೇವಾಲಯದಲ್ಲಿ ಪೂಜಾ ಕಾರ್ಯಗಳನ್ನು ಪ್ರಾರಂಭಿಸಲಾಗಿದೆ.  
ಒಂದಷ್ಟು ಜನರು ಶನಿವಾರದಿಂದೇ ದೇವಾಲಯವನ್ನು ತೆರೆಯಬೇಕೆಂದು ಒತ್ತಾಯ ಮಾಡಿದ್ದರು. ಆದರೆ ಮತ್ತೆ ಕೆಲವು ಜನರು ಶುದ್ಧೀಕರಣ ಕಾರ್ಯ ನಡೆದ ಬಳಿಕವಷ್ಟೇ ದೇವಾಲಯದಲ್ಲಿ ಪೂಜಾ ಕಾರ್ಯಗಳನ್ನು ಪ್ರಾರಂಭಿಸಬೇಕು ಎಂದು ಪಟ್ಟು ಹಿಡಿದ್ದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮತ್ತೊಬ್ಬ ಏಕನಾಥ ಶಿಂಧೆ ಹುಟ್ಟಲು ಸಾಧ್ಯವಿಲ್ಲ; 'ನವೆಂಬರ್ ಕ್ರಾಂತಿ'ಗೆ ಕಾಂಗ್ರೆಸ್ ಅವಕಾಶ ನೀಡಲ್ಲ!

ನಾಳೆಯಿಂದಲೇ ರಾಷ್ಟ್ರವ್ಯಾಪಿ SIR: ಮೊದಲ ಹಂತದಲ್ಲಿ ಕೇರಳ, ತಮಿಳುನಾಡು, ಬಂಗಾಳ ಸೇರಿ 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಶುದ್ಧೀಕರಣ

ಜಗತ್ತಿನ ಯಾವುದೇ ಭಾಗ ತಲುಪಿ ಧ್ವಂಸ ಮಾಡಬಲ್ಲ ರಷ್ಯಾದ ಬ್ಯೂರೆವೆಸ್ಟ್ನಿಕ್ ಪರಮಾಣು ಕ್ಷಿಪಣಿ ಪರೀಕ್ಷೆ ಯಶಸ್ವಿ; ಅಮೆರಿಕಾಗೆ ಢವ ಢವ, ತಣ್ಣಗಾದ ಟ್ರಂಪ್!

ಕೇಜ್ರಿವಾಲ್ ಗೆ ಬೇಲ್, SIR, ಆರ್ಟಿಕಲ್ 370, ವಾಕ್ ಸ್ವಾತಂತ್ರ್ಯದ ಬಗ್ಗೆ ತೀರ್ಪು..: ನೂತನ ಸಿಜೆಐ ಟ್ರ್ಯಾಕ್ ರೆಕಾರ್ಡ್ ಹೀಗಿದೆ...

ಹುಬ್ಬಳ್ಳಿಯ ಉದ್ಯಮಿ, ಗುತ್ತಿಗೆದಾರ ಆನಂದ ಹೂವಿನಹಡಗಲಿ ಲಾಡ್ಜ್‌ನಲ್ಲಿ ಆತ್ಮಹತ್ಯೆ!

SCROLL FOR NEXT