ಕೊಹಿನ್ನೂರ್ ವಜ್ರ 
ದೇಶ

ಕೊಹಿನ್ನೂರ್ ವಜ್ರವನ್ನು ಬ್ರಿಟಿಷರು ಕದ್ದಿಲ್ಲ; ಅದು ಉಡುಗೊರೆಯಾಗಿ ನೀಡಿದ್ದು!

ಕೊಹಿನ್ನೂರ್ ವಜ್ರವನ್ನು ಕದಿಯಲಾಗಿಲ್ಲ ಅಥವಾ ಬಲವಂತವಾಗಿ ಕೊಂಡೊಯ್ಯಲಾಗಿಲ್ಲ. ಈ ಅಮೂಲ್ಯ ವಜ್ರವನ್ನು ಮಹಾರಾಜ ರಂಜಿತ್ ಸಿಂಗ್...

ನವದೆಹಲಿ: ಬ್ರಿಟನ್ ಸರ್ಕಾರದ ವಶದಲ್ಲಿರುವ ಅಮೂಲ್ಯ ಕೊಹಿನ್ನೂರ್ ವಜ್ರವನ್ನು ವಾಪಸ್ ಕೇಳುವ ಹಾಗಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಕೇಂದ್ರ ಸಾಂಸ್ಕೃತಿಕ  ಸಚಿವಾಲಯದ ದಾಖಲೆಗಳ ಪ್ರಕಾರ ಕೊಹಿನ್ನೂರ್ ವಜ್ರವನ್ನು ಕದಿಯಲಾಗಿಲ್ಲ ಅಥವಾ ಬಲವಂತವಾಗಿ ಕೊಂಡೊಯ್ಯಲಾಗಿಲ್ಲ. ಈ ಅಮೂಲ್ಯ ವಜ್ರವನ್ನು ಮಹಾರಾಜ ರಂಜಿತ್ ಸಿಂಗ್ ಈಸ್ಟ್ ಇಂಡಿಯಾ ಕಂಪನಿಗೆ ಉಡುಗೊರೆಯಾಗಿ ನೀಡಿದ್ದರು ಎಂದು ಸಾಲಿಸಿಟರ್ ಜನರಲ್ ಹೇಳಿದ್ದಾರೆ.
ಆಲ್ ಇಂಡಿಯಾ ಹ್ಯೂಮನ್ ರೈಟ್ಸ್ ಆ್ಯಂಡ್ ಸೋಷ್ಯಲ್ ಜಸ್ಟೀಸ್ ಫ್ರಂಟ್ ಎಂಬ ಸಂಘಟನೆ ಸಲ್ಲಿಸಿದ ಅರ್ಜಿಯ ವಿಚಾರಣೆ ಸೋಮವಾರ ನಡೆದಿದ್ದು, ಆ ವೇಳೆ 
ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಈ ರೀತಿಯ ಉತ್ತರ ನೀಡಿದೆ. 
ಕೊಹಿನ್ನೂರ್ ವಜ್ರ,  ಟಿಪ್ಪು ಸುಲ್ತಾನ್ ಅವರ ಖಡ್ಗ ಮತ್ತು ಉಂಗುರವನ್ನು ಬ್ರಿಟಿಷರು ಕೊಂಡೊಯ್ದಿದ್ದು, ಅದನ್ನು ವಾಪಸ್ ತರಬೇಕು ಎಂಬುದು ಈ ಸಂಘಟನೆಯ ಆಗ್ರಹವಾಗಿದೆ.
ಆದರೆ ಕೊಹಿನ್ನೂರ್ ವಜ್ರವನ್ನು ಬ್ರಿಟಿಷರು ಭಾರತದಿಂದ ಕದ್ದೊಯ್ದಿಲ್ಲ, ಬಲವಂತವಾಗಿ ತೆಗೆದುಕೊಂಡೂ ಹೋಗಲಿಲ್ಲ ಎಂದು ಸರ್ಕಾರ ಹೇಳಿದೆ.
ಆದಾಗ್ಯೂ, ಈ ಪ್ರಕರಣದಲ್ಲಿ ವಿದೇಶಾಂಗ ಸಚಿವಾಲಯದ ನಿಲುವು ಏನೆಂದು ಪ್ರಸ್ತುತ ಸಚಿವಾಲಯ ಸುಪ್ರೀಂಕೋರ್ಟ್‌ಗೆ ತಿಳಿಸಿಲ್ಲ. ಈ ಬಗ್ಗೆ  ವರದಿ ಸಲ್ಲಿಸಲು ಕೋರ್ಟ್ ಒಂದು ವಾರದ ಕಾಲಾವಕಾಶವನ್ನು ನೀಡಿದೆ.
1850ರಲ್ಲಿ ವಿಕ್ಟೋರಿಯಾ ಮಹಾರಾಣಿಗೆ ಮಹಾರಾಜ ರಂಜಿತ್ ಸಿಂಗ್ ಈ ವಜ್ರವನ್ನು ಉಡುಗೊರೆಯಾಗಿ ನೀಡಿದ್ದರು. ಕಿರೀಟದಲ್ಲಿರುವ ಈ ವಜ್ರವೀಗ ಟವರ್ ಆಫ್ ಲಂಡನ್‌ನಲ್ಲಿ ಪ್ರದರ್ಶನ ವಸ್ತುವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT