ಸೋನಿಯಾ, ರಾಹುಲ್ 
ದೇಶ

ನ್ಯಾಷನಲ್ ಹೆರಾಲ್ಡ್ ಕೇಸ್: ಕಾಂಗ್ರೆಸ್ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಚಿವಾಲಯಗಳಿಂದ ಪಡೆದ ದಾಖಲೆಗಳನ್ನು ಸಲ್ಲಿಸುವಂತೆ...

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಚಿವಾಲಯಗಳಿಂದ ಪಡೆದ ದಾಖಲೆಗಳನ್ನು ಸಲ್ಲಿಸುವಂತೆ ನೀಡಿದ್ದ ಸಮನ್ಸ್ ಪ್ರಶ್ನಿಸಿ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ತೀರ್ಪನ್ನು ಕಾಯ್ದರಿಸಿದೆ.
ಕಳೆದ ತಿಂಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಹಾಗೂ ಅಸೋಸಿಯೆಟೆಟ್ ಜರ್ನಲ್ಸ್ ಪ್ರೈ, ಲಿ. ತನ್ನ ಬ್ಯಾಲನ್ಸ್ ಸೀಟ್ ಅನ್ನು ದೆಹಲಿ ಕೋರ್ಟ್‌ ಗೆ ಸಲ್ಲಿಸಿತ್ತು. ಕಳೆದ ತಿಂಗಳು 2010–11ನೇ ಸಾಲಿನ ತನ್ನ ಲೆಕ್ಕಪತ್ರಗಳನ್ನು ಸಲ್ಲಿಸುವಂತೆ ಕೋರ್ಟ್ ಸೂಚಿಸಿತ್ತು. 
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಹಾಗೂ ಅಸೋಸಿಯೆಟೆಡ್ ಜರ್ನಲ್ ತನ್ನ ಬ್ಯಾಲನ್ಸ್ ಶೀಟ್ ಸಲ್ಲಿಸಬೇಕು ಎಂದು ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಗೆ ಕೋರ್ಟ್ ಅನುಮತಿ ನೀಡಿತ್ತು. 
ಅಸೋಸಿಯೆಟೆಡ್ ಜರ್ನಲ್ಸ್ ಗೆ ಕಾಂಗ್ರೆಸ್ 90.25 ಕೋಟಿ ರುಪಾಯಿ ಬಡ್ಡಿ ರಹಿತ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಹಣಕಾಸಿನ ವ್ಯವಾಹರಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ನೀಡಬೇಕು ಎಂದು ಕೋರಿ ಸುಬ್ರಮಣ್ಯಯನ್ ಸ್ವಾಮಿ ಅವರು ಪಟಿಯಾಲ ಹೌಸ್ ಕೋರ್ಟ್ ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!