ಪಂಕಜಾ ಮುಂಡೆ ಸೆಲ್ಫಿ 
ದೇಶ

ಬರ ಪ್ರದೇಶದಲ್ಲಿ ಸಚಿವೆ ಪಂಕಜಾ ಮುಂಡೆ ಸೆಲ್ಫಿಗೆ ಶಿವಸೇನೆ ಕಿಡಿ

ಬರ ಪೀಡಿತ ಪ್ರದೇಶದಲ್ಲಿ ಮಹಾರಾಷ್ಟ್ರದ ನೀರಾವರಿ ಸಚಿವೆ ಪಂಕಜಾ ಮುಂಡೆ ಸೆಲ್ಫೀ ತೆಗೆದುಕೊಂಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದ್ದು, ಸಚಿವೆ ಇಂತಹ...

ಮುಂಬೈ: ಬರ ಪೀಡಿತ ಪ್ರದೇಶದಲ್ಲಿ ಮಹಾರಾಷ್ಟ್ರದ ನೀರಾವರಿ ಸಚಿವೆ ಪಂಕಜಾ ಮುಂಡೆ ಸೆಲ್ಫೀ ತೆಗೆದುಕೊಂಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದ್ದು, ಸಚಿವೆ ಇಂತಹ ಕೆಲಸವನ್ನು ಮಾಡುವ ಮುನ್ನ ಯೋಚಿಸಬೇಕಿತ್ತು ಎಂದು ಶಿವಸೇನೆ ಕಿಡಿಕಾರಿದೆ.

ಮಹಾರಾಷ್ಟ್ರ ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದೆ. ನೀರಿಗಾಗಿ ಮಹಿಳೆಯರು ಹಾಗೂ ಮಕ್ಕಳು ಹಿನ್ನಿಲ್ಲದಂತೆ ಪರದಾಡುತ್ತಿದ್ದಾರೆ. ಬರಪೀಡಿತ ಪ್ರದೇಶಗಳಲ್ಲಿ ಶಿವಸೇನೆ ಇನ್ನಿಲ್ಲದಂತೆ ಕೆಲಸವನ್ನು ಮಾಡುತ್ತಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸಚಿವೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಸರಿನಾ ಎಂದು ಶಿವಸೇನೆ ಮುಖಂಡ ಮನೀಷ್ ಕಯಾಂದೆ ಕಿಡಿಕಾರಿದ್ದಾರೆ.

ಬರ ಪೀಡಿತ ಪ್ರದೇಶದಲ್ಲಿ ನಿಂತು ಸೆಲ್ಫಿ ಕ್ಲಿಕಿಸಿಕೊಂಡಿರುವುದು ದುರದೃಷ್ಟಕರ ಸಂಗತಿ. ಕೆಲವೊಂದು ಕೆಲಸಗಳನ್ನು ಮಾಡುವ ಮುನ್ನ ಸಚಿವೆ ಪಂಕಜಾ ಮುಂಡೆ ಯೋಚಿಸಬೇಕಿತ್ತು. ಇನ್ನು ಮುಂದಾದರು ಇಂತಹ ಹುಡುಗಾಟದ ಕೆಲವನ್ನು ಮಾಡದಿರಲಿ ಎಂದು ಮನೀಷ್ ಹೇಳಿದ್ದಾರೆ.

ಬರ ಪರಿಸ್ಥಿತಿಯನ್ನು ವೀಕ್ಷಿಸಿಲು ಲಾತೂರ್‍ಗೆ ಪ್ರವಾಸ ಕೈಗೊಂಡಿದ್ದ ಸಚಿವೆ ಪಂಕಜಾ ಮುಂಡೆ, ಈ ವೇಳೆ ನೀರಿಲ್ಲದೆ ಬತ್ತಿ ಹೋಗಿರುವ ಕೆರೆಯ ಬಳಿ ನಿಂತು ಸೆಲ್ಪೀ ತೆಗೆದುಕೊಂಡಿದ್ದರು.

ಅಲ್ಲದೆ ಆ ಫೋಟೋವನ್ನು ಸಾಮಾಜಿಕ ಜಾಲತಾಣ ಟಿಟ್ಟರ್‍ನಲ್ಲಿ ಹಾಕಿಕೊಂಡಿದ್ದಾರೆ. ಆದರೆ ಈ ಸೆಲ್ಫಿ ಕ್ರೇಝ್ ಇದೀಗ ವ್ಯಾಪಕ ಟೀಕೆಗಳಿಗೆ ಗುರಿಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT