ಸಾಂದರ್ಭಿಕ ಚಿತ್ರ 
ದೇಶ

ಅಕ್ರಮ ಪಟಾಕಿ ತಯಾರಿಕಾ ಕೇಂದ್ರದಲ್ಲಿ ಪಟಾಕಿ ಸಿಡಿದು 2 ಸಾವು, ಹಲವರಿಗೆ ಗಾಯ

ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಗುರವಂ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಪಟಾಕಿ ಸಿಡಿದು ಇಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ...

ಶ್ರೀಕಾಕುಲಂ: ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಗುರವಂ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಪಟಾಕಿ ಸಿಡಿದು ಇಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ ವರದಿಯಾಗಿದೆ. ಈ ಘಟನೆಯಲ್ಲಿ ಎಂಟಕ್ಕಿಂತಲೂ  ಹೆಚ್ಚು ಮಂದಿಗೆ  ಗಾಯಗಳಾಗಿವೆ ಎಂದು ಬಲ್ಲಮೂಲಗಳು ಹೇಳಿವೆ. 
ಈ ಮನೆಯಲ್ಲಿ ಅಕ್ರಮವಾಗಿ ಪಟಾಕಿ ತಯಾರಿಕಾ ಕೇಂದ್ರ ಕಾರ್ಯವೆಸಗುತ್ತಿತ್ತು ಎಂದು ಹೇಳಲಾಗುತ್ತಿದೆ. ಮನೆಯಲ್ಲಿ ಬೆಂಕಿ ಉರಿಸಿದ ವೇಳೆ ಕಿಡಿಯೊಂದು ಪಟಾಕಿಗೆ ತಗುಲಿ ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಲ್ಲಿ ಉಲ್ಲೇಖಿಸಲಾಗಿದೆ.
ಈ ಗ್ರಾಮದಲ್ಲಿರುವ ಹಲವಾರು ಮನೆಗಳಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸಲಾಗುತ್ತಿದೆ ಎಂಬ ವಿಷಯವೂ ಈ ಘಟನೆಯೊಂದಿಗೆ ಬೆಳಕಿಗೆ ಬಂದಿದೆ.  ಅಧಿಕಾರಿಗಳಿಗೆ ಈ ಬಗ್ಗೆ ಗೊತ್ತಿದ್ದರೂ ಅವರ್ಯಾರೂ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಲ್ಲಿನ ಸ್ಥಳೀಯರು ದೂರಿದ್ದಾರೆ.
ವಾರದ ಹಿಂದೆಯಷ್ಟೇ ಕೇರಳದ ಕೊಲ್ಲಂ ಪರವೂರ್ ಪುಟ್ಟಿಂಗಲ್ ದೇವಿ ಜಾತ್ರೆಯಲ್ಲಿ ಸಂಭವಿಸಿದ ಪಟಾಕಿ ದುರಂತದಲ್ಲಿ ನೂರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ': ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ಸಂಸತ್ ಅಧಿವೇಶನಕ್ಕೆ ತೆರೆ: ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬಾಂಗ್ಲಾದಲ್ಲಿ ಮತ್ತೆ ಹಿಂದೂಗಳ ವಿರುದ್ಧ ಮತ್ತೆ ಭುಗಿಲೆದ್ದ ಹಿಂಸಾಚಾರ; ಹಲ್ಲೆ, ಬೆಂಕಿ ಹಚ್ಚಿ ವ್ಯಕ್ತಿಯ ಕೊಲೆ!

ಪಾಕ್ ಮಹಿಳೆಯ ಪೌರತ್ವ ಅರ್ಜಿ: ವೀಸಾ ಅವಧಿ ಮುಗಿಯುವ ಮುನ್ನಾ ಪ್ರಕ್ರಿಯೆ ಪೂರ್ಣಗೊಳಿಸಿ- ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ

Gold Smuggling Case: ನಟಿ ರನ್ಯಾ ರಾವ್​ಗಿಲ್ಲ ರಿಲೀಫ್; ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

SCROLL FOR NEXT