ಸಾಂದರ್ಭಿಕ ಚಿತ್ರ 
ದೇಶ

ಅಕ್ರಮ ಪಟಾಕಿ ತಯಾರಿಕಾ ಕೇಂದ್ರದಲ್ಲಿ ಪಟಾಕಿ ಸಿಡಿದು 2 ಸಾವು, ಹಲವರಿಗೆ ಗಾಯ

ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಗುರವಂ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಪಟಾಕಿ ಸಿಡಿದು ಇಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ...

ಶ್ರೀಕಾಕುಲಂ: ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಗುರವಂ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಪಟಾಕಿ ಸಿಡಿದು ಇಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ ವರದಿಯಾಗಿದೆ. ಈ ಘಟನೆಯಲ್ಲಿ ಎಂಟಕ್ಕಿಂತಲೂ  ಹೆಚ್ಚು ಮಂದಿಗೆ  ಗಾಯಗಳಾಗಿವೆ ಎಂದು ಬಲ್ಲಮೂಲಗಳು ಹೇಳಿವೆ. 
ಈ ಮನೆಯಲ್ಲಿ ಅಕ್ರಮವಾಗಿ ಪಟಾಕಿ ತಯಾರಿಕಾ ಕೇಂದ್ರ ಕಾರ್ಯವೆಸಗುತ್ತಿತ್ತು ಎಂದು ಹೇಳಲಾಗುತ್ತಿದೆ. ಮನೆಯಲ್ಲಿ ಬೆಂಕಿ ಉರಿಸಿದ ವೇಳೆ ಕಿಡಿಯೊಂದು ಪಟಾಕಿಗೆ ತಗುಲಿ ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಲ್ಲಿ ಉಲ್ಲೇಖಿಸಲಾಗಿದೆ.
ಈ ಗ್ರಾಮದಲ್ಲಿರುವ ಹಲವಾರು ಮನೆಗಳಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸಲಾಗುತ್ತಿದೆ ಎಂಬ ವಿಷಯವೂ ಈ ಘಟನೆಯೊಂದಿಗೆ ಬೆಳಕಿಗೆ ಬಂದಿದೆ.  ಅಧಿಕಾರಿಗಳಿಗೆ ಈ ಬಗ್ಗೆ ಗೊತ್ತಿದ್ದರೂ ಅವರ್ಯಾರೂ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಲ್ಲಿನ ಸ್ಥಳೀಯರು ದೂರಿದ್ದಾರೆ.
ವಾರದ ಹಿಂದೆಯಷ್ಟೇ ಕೇರಳದ ಕೊಲ್ಲಂ ಪರವೂರ್ ಪುಟ್ಟಿಂಗಲ್ ದೇವಿ ಜಾತ್ರೆಯಲ್ಲಿ ಸಂಭವಿಸಿದ ಪಟಾಕಿ ದುರಂತದಲ್ಲಿ ನೂರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್