ಕೃಪಾಲ್ ಸಿಂಗ್ ಮೃತದೇಹ 
ದೇಶ

ಭಾರತಕ್ಕೆ ಬಂದ ಕೃಪಾಲ್ ಸಿಂಗ್ ಮೃತದೇಹ, ದೇಹದ ಅಂಗಾಂಗಗಳು ನಾಪತ್ತೆ

ಕಳೆದ ವಾರ ಪಾಕಿಸ್ತಾನದ ಲಾಹೋರ್ ಜೈಲಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಕೃಪಾಲ್ ಸಿಂಗ್ ದೇಹವನ್ನು ಮಂಗಳವಾರ ದೆಹಲಿಗೆ ತರಲಾಗಿದ್ದು,...

ನವದೆಹಲಿ: ಕಳೆದ ವಾರ ಪಾಕಿಸ್ತಾನದ ಲಾಹೋರ್ ಜೈಲಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಕೃಪಾಲ್ ಸಿಂಗ್ ದೇಹವನ್ನು ಮಂಗಳವಾರ ದೆಹಲಿಗೆ ತರಲಾಗಿದ್ದು, ಆತನ ದೇಹದಲ್ಲಿ ಕೆಲವು ಅಂಗಾಂಗಗಳು ನಾಪತ್ತೆಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಲಾಹೋರ್‌ ಲಾಖಪತ್ ಜೈಲಿನಿಂದ ಕೃಪಾಲ್ ದೇಹವನ್ನು ಇಂದು ವಾಘಾಗಡಿ ಮೂಲಕ ಭಾರತಕ್ಕೆೆ ತರಲಾಗಿತ್ತು. ಬಳಿಕ ಭಾರತೀಯ ವೈದ್ಯರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದರು. 
ಕೃಪಾಲ್ ಸಿಂಗ್ ದೇಹದಲ್ಲಿ ಕೆಲವು ಭಾಗಗಳು ಇಲ್ಲ ಎಂದು ಮರಣೋತ್ತರ ಪರೀಕ್ಷೆ ನಂತರ ತಿಳಿಸಿದ್ದಾರೆ. ಇದಕ್ಕು ಮುನ್ನ ಪಾಕಿಸ್ತಾನಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದು, ದೇಹದ ಮೇಲೆ ಯಾವುದೇ ಗಾಯಗಳು ಪತ್ತೆಯಾಗಿಲ್ಲ ಎಂದಿದ್ದಾರೆ.
ಆಂತರಿಕವಾಗಿ ಅಥವಾ ಬಾಹ್ಯವಾಗಿ ದೇಹದ ಮೇಲೆ ಯಾವುದೇ ಗಾಯಗಳು ಪತ್ತೆಯಾಗಿಲ್ಲ. ಆದರೆ ದೇಹದ ಕೆಲವು ಅಂಗಾಂಗಗಳು ನಾಪತ್ತೆಯಾಗಿವೆ. ಪಾಕಿಸ್ತಾನದಲ್ಲಿ ನಡೆದ ಮೊದಲ ಮರಣೋತ್ತರ ಪರೀಕ್ಷೆ ವೇಳೆ ಅವುಗಳನ್ನು ಸ್ಯಾಂಪಲ್ ಗಾಗಿ ತೆಗೆದುಕೊಂಡಿರಬಹುದು ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಡಾ.ಅಶೋಕ್ ಅವರು ತಿಳಿಸಿದ್ದಾರೆ.
ಈ ವೇಳೆ ಪಂಜಾಬ್ ಸಚಿವ ಗುಲ್ಜಾರ್ ಸಿಂಗ್ ರಾನಿಕೆ ಮತ್ತು ಅಮೃತ್‌ಸರ ಜಿಲ್ಲಾಧಿಕಾರಿ ವರುಣ್ ರೂಜಾಮ್ ಹಾಗೂ ಕೃಪಾಲ್ ಕುಟುಂಬದ ಸದಸ್ಯರು ಸೇರಿದಂತೆ ನೂರಾರು ಜನರು ಹಾಜರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT