ಕೊಹಿನ್ನೂರ್ ವಜ್ರ 
ದೇಶ

ಕೊಹಿನ್ನೂರ್ ವಜ್ರ ದೇಶದ ಆಸ್ತಿ, ಅದನ್ನು ವಾಪಸ್ ತರಬೇಕು: ಆರ್ ಎಸ್ಎಸ್

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೋಹಿನ್ನೂರ್ ವಜ್ರವನ್ನು ದೇಶದ ಆಸ್ತಿ ಎಂದು ಹೇಳಿದ್ದು, ಅದನ್ನು ವಾಪಸ್ ತರಬೇಕು ಎಂದು ಒತ್ತಾಯಿಸಿದೆ.

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೋಹಿನ್ನೂರ್ ವಜ್ರವನ್ನು ದೇಶದ ಆಸ್ತಿ ಎಂದು ಹೇಳಿದ್ದು, ಅದನ್ನು ವಾಪಸ್ ತರಬೇಕು ಎಂದು ಒತ್ತಾಯಿಸಿದೆ.
ಕೊಹಿನ್ನೂರ್ ವಜ್ರವನ್ನು ಕದಿಯಲಾಗಿಲ್ಲ ಅಥವಾ ಬಲವಂತವಾಗಿ ಕೊಂಡೊಯ್ಯಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಆರ್ ಎಸ್ಎಸ್ ನ ನಾಯಕ ಇಂದ್ರೇಶ್ ಕುಮಾರ್ ಕೋಹಿನ್ನೂರ್ ವಜ್ರ ಭಾರತದ ಆಸ್ತಿ ಹಾಗೂ ಅದನ್ನು ವಾಪಸ್ ತರಬೇಕೆಂದು ಹೇಳಿದ್ದಾರೆ.
ಕೇಂದ್ರ ಸಾಂಸ್ಕೃತಿಕ ಸಚಿವಾಲಯದ ದಾಖಲೆಗಳ ಪ್ರಕಾರ ಕೊಹಿನ್ನೂರ್ ವಜ್ರವನ್ನು ಕದಿಯಲಾಗಿಲ್ಲ ಅಥವಾ ಬಲವಂತವಾಗಿ ಕೊಂಡೊಯ್ಯಲಾಗಿಲ್ಲ. ಈ ಅಮೂಲ್ಯ ವಜ್ರವನ್ನು ಮಹಾರಾಜ ರಂಜಿತ್ ಸಿಂಗ್ ಈಸ್ಟ್ ಇಂಡಿಯಾ ಕಂಪನಿಗೆ ಉಡುಗೊರೆಯಾಗಿ ನೀಡಿದ್ದರು ಎಂದು ಸಾಲಿಸಿಟರ್ ಜನರಲ್ ಹೇಳಿದ್ದರು. ಆಲ್ ಇಂಡಿಯಾ ಹ್ಯೂಮನ್ ರೈಟ್ಸ್ ಆ್ಯಂಡ್ ಸೋಷ್ಯಲ್ ಜಸ್ಟೀಸ್ ಫ್ರಂಟ್ ಎಂಬ ಸಂಘಟನೆ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ
ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಈ ರೀತಿಯ ಉತ್ತರ ನೀಡಿದೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರದ ಹೇಳಿಕೆಗೆ ಆರ್ ಎಸ್ಎಸ್ ವ್ಯತಿರಿಕ್ತವಾದ ಹೇಳಿಕೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT