ಕೊಹಿನ್ನೂರ್ ವಜ್ರ 
ದೇಶ

ಕೊಹಿನ್ನೂರ್ ವಜ್ರ ದೇಶದ ಆಸ್ತಿ, ಅದನ್ನು ವಾಪಸ್ ತರಬೇಕು: ಆರ್ ಎಸ್ಎಸ್

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೋಹಿನ್ನೂರ್ ವಜ್ರವನ್ನು ದೇಶದ ಆಸ್ತಿ ಎಂದು ಹೇಳಿದ್ದು, ಅದನ್ನು ವಾಪಸ್ ತರಬೇಕು ಎಂದು ಒತ್ತಾಯಿಸಿದೆ.

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೋಹಿನ್ನೂರ್ ವಜ್ರವನ್ನು ದೇಶದ ಆಸ್ತಿ ಎಂದು ಹೇಳಿದ್ದು, ಅದನ್ನು ವಾಪಸ್ ತರಬೇಕು ಎಂದು ಒತ್ತಾಯಿಸಿದೆ.
ಕೊಹಿನ್ನೂರ್ ವಜ್ರವನ್ನು ಕದಿಯಲಾಗಿಲ್ಲ ಅಥವಾ ಬಲವಂತವಾಗಿ ಕೊಂಡೊಯ್ಯಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಆರ್ ಎಸ್ಎಸ್ ನ ನಾಯಕ ಇಂದ್ರೇಶ್ ಕುಮಾರ್ ಕೋಹಿನ್ನೂರ್ ವಜ್ರ ಭಾರತದ ಆಸ್ತಿ ಹಾಗೂ ಅದನ್ನು ವಾಪಸ್ ತರಬೇಕೆಂದು ಹೇಳಿದ್ದಾರೆ.
ಕೇಂದ್ರ ಸಾಂಸ್ಕೃತಿಕ ಸಚಿವಾಲಯದ ದಾಖಲೆಗಳ ಪ್ರಕಾರ ಕೊಹಿನ್ನೂರ್ ವಜ್ರವನ್ನು ಕದಿಯಲಾಗಿಲ್ಲ ಅಥವಾ ಬಲವಂತವಾಗಿ ಕೊಂಡೊಯ್ಯಲಾಗಿಲ್ಲ. ಈ ಅಮೂಲ್ಯ ವಜ್ರವನ್ನು ಮಹಾರಾಜ ರಂಜಿತ್ ಸಿಂಗ್ ಈಸ್ಟ್ ಇಂಡಿಯಾ ಕಂಪನಿಗೆ ಉಡುಗೊರೆಯಾಗಿ ನೀಡಿದ್ದರು ಎಂದು ಸಾಲಿಸಿಟರ್ ಜನರಲ್ ಹೇಳಿದ್ದರು. ಆಲ್ ಇಂಡಿಯಾ ಹ್ಯೂಮನ್ ರೈಟ್ಸ್ ಆ್ಯಂಡ್ ಸೋಷ್ಯಲ್ ಜಸ್ಟೀಸ್ ಫ್ರಂಟ್ ಎಂಬ ಸಂಘಟನೆ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ
ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಈ ರೀತಿಯ ಉತ್ತರ ನೀಡಿದೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರದ ಹೇಳಿಕೆಗೆ ಆರ್ ಎಸ್ಎಸ್ ವ್ಯತಿರಿಕ್ತವಾದ ಹೇಳಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT