ಹಂದ್ವಾರದಲ್ಲಿ ಭದ್ರತಾ ಸಿಬ್ಬಂದಿ 
ದೇಶ

ಹಂದ್ವಾರ ಮಾರ್ಕೆಟ್ ನಿಂದ ಭದ್ರತಾ ಪಡೆಯ ಮೂರು ಬಂಕರ್ ತೆರವು

ಜಮ್ಮು ಮತ್ತು ಕಾಶ್ಮೀರದ ಹಿಂಸಾಚಾರ ಪೀಡಿತ ಹಂದ್ವಾರ ನಗರದ ಮಾರ್ಕೆಟ್ ಸ್ಥಳದಲ್ಲಿದ್ದ ಭದ್ರತಾ ಪಡೆಯ ಮೂರು ಬಂಕರ್ ಗಳನ್ನು ನಗರಸಭೆ ಅಧಿಕಾರಿಗಳು...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಿಂಸಾಚಾರ ಪೀಡಿತ ಹಂದ್ವಾರ ನಗರದ ಮಾರ್ಕೆಟ್ ಸ್ಥಳದಲ್ಲಿದ್ದ ಭದ್ರತಾ ಪಡೆಯ ಮೂರು ಬಂಕರ್ ಗಳನ್ನು ನಗರಸಭೆ ಅಧಿಕಾರಿಗಳು ಮಂಗಳವಾರ ತೆರವುಗೊಳಿಸಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳ ಬಹುದಿನದ ಬೇಡಿಕೆ ಈಡೇರಿದಂತಾಗಿದೆ.
ಹಂದ್ವಾರದ ಮುಖ್ಯ ಮಾರುಕಟ್ಟೆಯಲ್ಲಿ ಅಂಗಡಿಗಳ ಮೇಲೆ ನಿರ್ಮಿಸಲಾಗಿದ್ದ ಮೂರು ಬಂಕರ್ ಗಳನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಾರುಕಟ್ಟೆ ಸ್ಥಳದಲ್ಲಿದ್ದ ಮೂರು ಬಂಕರ್ ಗಳನ್ನು ತೆರವುಗೊಳಿಸಿರುವ ನಗರಸಭೆ ಅಧಿಕಾರಿಗಳು ಆ ಸ್ಥಳದಲ್ಲಿ ಸಾರ್ವಜನಿಕ ಉದ್ಯಾನವನಕ್ಕಾಗಿ ಮೀಸಲಿಟ್ಟ ಜಾಗ ಇದು ಎಂಬ ಬೋರ್ಡ್ ಅನ್ನು ಸಹ ಹಾಕಿದ್ದಾರೆ,
ಈ ಬಂಕರ್ ಗಳನ್ನು ತೆರವುಗೊಳಿಸಬೇಕು ಎಂದು ಸ್ಥಳೀಯರು ಹಲವು ದಿನಗಳಿಂದ ಒತ್ತಾಯಿಸುತ್ತಿದ್ದರು. ಆದರೆ ಸೇನೆ ಇದಕ್ಕೆ ನಿರಾಕರಿಸಿತ್ತು. ಕಳೆದ ವಾರ ಯೋಧನೊಬ್ಬ ಬಾಲಕಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ನಂತರ ಬಂಕರ್ ತೆರವುಗೊಳಿಸಬೇಕು ಎಂಬ ಬೇಡಿಕೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT