ಶಕ್ತಿಮಾನ್ 
ದೇಶ

ಬಿಜೆಪಿ ಪ್ರತಿಭಟನೆ ವೇಳೆ ಗಾಯಗೊಂಡಿದ್ದ ಪೊಲೀಸ್ ಕುದುರೆ 'ಶಕ್ತಿಮಾನ್' ಇನ್ನಿಲ್ಲ

ಬಿಜೆಪಿ ಪ್ರತಿಭಟನೆ ವೇಳೆ ತೀವ್ರವಾಗಿ ಗಾಯಗೊಂಡು ಕಾಲು ಮುರಿದುಕೊಂಡಿದ್ದ ಉತ್ತರಾಖಂಡ್ ಪೊಲೀಸ್ ಕುದುರೆ ಶಕ್ತಿಮಾನ್...

ಡೆಹ್ರಾಡೂನ್: ಬಿಜೆಪಿ ಪ್ರತಿಭಟನೆ ವೇಳೆ ತೀವ್ರವಾಗಿ ಗಾಯಗೊಂಡು ಕಾಲು ಮುರಿದುಕೊಂಡಿದ್ದ ಉತ್ತರಾಖಂಡ್ ಪೊಲೀಸ್ ಕುದುರೆ ಶಕ್ತಿಮಾನ್ ಬುಧವಾರ ಸಂಜೆ ಸಾವನ್ನಪ್ಪಿದೆ.
ಕಳೆದ ಮಾರ್ಚ್ 14ರಂದು ಡೆಹ್ರಾಡೂನ್ ನಲ್ಲಿ ಅಂದಿನ ಕಾಂಗ್ರೆಸ್ ಮುಖ್ಯಮಂತ್ರಿ ಹರಿಶ್ ರಾವತ್ ವಿರುದ್ಧ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಕಾಲು ಮುರಿದುಕೊಂಡಿದ್ದ ಶಕ್ತಿಮಾನ್‌ ಗೆ ಹತ್ತು ವೈದ್ಯರ ತಂಡ ನಿರಂತರ ಐದು ತಾಸುಗಳ ಶಸ್ತ್ರ ಚಿಕಿತ್ಸೆ ನಡೆಸಿ ಅದರ ಕಾಲು ಬಹುಮಟ್ಟಿಗೆ ಉಳಿಯುವಂತೆ ಮಾಡಲು ಯತ್ನಿಸಿ, ಅಂತಿಮವಾಗಿ ಕೃತಕ ಕಾಲು ಜೋಡಿಸಿದ್ದರು. ಆದರೂ ಸಂಪೂರ್ಣವಾಗಿ ಗುಣಮುಖವಾಗಲು ಅದಕ್ಕೆ ಸಾಧ್ಯವಾಗಿರಲಿಲ್ಲ,
ಪ್ರತಿಭಟನೆ ವೇಳೆ ಮುಸ್ಸೂರಿ ಬಿಜೆಪಿ ಶಾಸಕ ಗಣೇಶ್ ಜೋಷಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಶಕ್ತಿಮಾನ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದರು. ಜೋಷಿಯವರ ಹೊಡೆತಕ್ಕೆ ಕುದುರೆಯ ಕಾಲು ಮುರಿದು ಹೋಗಿತ್ತು. ಈ ಸಂಬಂಧ ಅವರನ್ನು ಬಂಧಿಸಲಾಗಿತ್ತು.
13 ವರ್ಷ ಪ್ರಾಯದ ಶಕ್ತಿಮಾನ್‌ ಕುದುರೆ ಕಳೆದ ಹತ್ತು ವರ್ಷಗಳಿಂದ ಸೇವೆಯಲ್ಲಿದ್ದು ಪೊಲೀಸರ ಹೆಮ್ಮೆ ಎನಿಸಿಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT