ಕೊಹಿನ್ನೂರ್ ವಜ್ರ 
ದೇಶ

ವಿದೇಶದಲ್ಲಿರುವ ಭಾರತದ ಎಲ್ಲ ಪಾರಂಪರಿಕ ವಸ್ತುಗಳನ್ನು ವಾಪಸ್ ತರಲು ಕಾಂಗ್ರೆಸ್ ಒತ್ತಾಯ

ಬ್ರಿಟಿಷರ ಬಳಿಯಿರುವ ಕೊಹಿನ್ನೂರ್ ವಜ್ರವನ್ನು ವಾಪಸ್ ತರಬೇಕೆಂದು ಎಲ್ಲೆಡೆ ಒತ್ತಾಯ ಕೇಳಿ ಬರುತ್ತಿರುವಾಗಲೇ, ವಿದೇಶದಲ್ಲಿರುವ ಭಾರತದ ...

ನವದೆಹಲಿ: ಬ್ರಿಟಿಷರ ಬಳಿಯಿರುವ ಕೊಹಿನ್ನೂರ್ ವಜ್ರವನ್ನು ವಾಪಸ್ ತರಬೇಕೆಂದು ಎಲ್ಲೆಡೆ ಒತ್ತಾಯ ಕೇಳಿ ಬರುತ್ತಿರುವಾಗಲೇ, ವಿದೇಶದಲ್ಲಿರುವ ಭಾರತದ ಎಲ್ಲ ಪಾರಂಪರಿಕ ವಸ್ತುಗಳನ್ನು ವಾಪಸ್ ತರಲೇ ಬೇಕು ಎಂದು ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಬ್ರಿಟನ್ ವಶದಲ್ಲಿರುವ ಕೊಹಿನ್ನೂರ್ ವಜ್ರವನ್ನು ವಾಪಸ್ ತರಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಲಾಗುತ್ತದೆ ಎಂದು ಸರ್ಕಾರ ಮಂಗಳವಾರ ಭರವಸೆ ನೀಡಿತ್ತು. 
ಬ್ರಿಟಿಷ್ ಸರ್ಕಾರ ಕೊಹಿನ್ನೂರ್ ವಜ್ರವನ್ನು ಬಲವಂತವಾಗಿ ತೆಗೆದುಕೊಂಡು ಹೋಗಿಲ್ಲ, ಪಂಜಾಬ್ ನ ಮಹಾರಾಜ ರಂಜಿತ್ ಸಿಂಗ್ ಅವರ ಪುತ್ರ ಮಹಾರಾಜ ದುಲೀಪ್ ಸಿಂಗ್ ಅವರು ಕೊಹಿನ್ನೂರ್ ವಜ್ರವನ್ನು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಗೆ  ಉಡುಗೊರೆಯಾಗಿ ನೀಡಿದ್ದರು  ಎಂದು ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಸುಪ್ರೀಂ ಕೋರ್ಟ್‌ಗೆ ಹೇಳಿದ ಬೆನ್ನಲ್ಲೇ ಸರ್ಕಾರ ಈ  ರೀತಿ ಪ್ರತಿಕ್ರಿಯೆ ನೀಡಿತ್ತು. 
ಏತನ್ಮಧ್ಯೆ, ಬಿಜೆಪಿ ಸರ್ಕಾರ ಯು ಟರ್ನ್ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸರ್ಕಾರ ದ ಈ ನಿರ್ಧಾರಗಳು ಪ್ರಧಾನಿ ಕಚೇರಿ ಹಾಗೂ ಸರ್ಕಾರದ ಬಾಲಿಶತನವನ್ನು ತೋರಿಸುತ್ತದೆ ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT