ಸುಬ್ರಹ್ಮಣಿಯನ್ ಸ್ವಾಮಿ, ಮೇರಿ ಕೋಮ್, ಸ್ವಪನ್ ದಾಸ್ ಗುಪ್ತ ರಾಜ್ಯಸಭೆಗೆ? 
ದೇಶ

ಸುಬ್ರಹ್ಮಣಿಯನ್ ಸ್ವಾಮಿ, ಮೇರಿ ಕೋಮ್, ಸ್ವಪನ್ ದಾಸ್ ಗುಪ್ತ ರಾಜ್ಯಸಭೆಗೆ?

ಸೋಮವಾರದಿಂದ (ಏ.25 ರಿಂದ) ಸಂಸತ್ ಅಧಿವೇಶನ ಪ್ರಾರಂಭವಾಗಲಿದ್ದು ರಾಜ್ಯಸಭೆಯಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಕೇಂದ್ರ ಸರ್ಕಾರ ಅಂತಿಮ ಹಂತದ ಸಿದ್ಧತೆ ನಡೆಸಿದೆ.

ನವದೆಹಲಿ: ಸೋಮವಾರದಿಂದ (ಏ.25 ರಿಂದ) ಸಂಸತ್ ಅಧಿವೇಶನ ಪ್ರಾರಂಭವಾಗಲಿದ್ದು ರಾಜ್ಯಸಭೆಯಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಕೇಂದ್ರ ಸರ್ಕಾರ ಅಂತಿಮ ಹಂತದ ಸಿದ್ಧತೆ ನಡೆಸಿದೆ.
ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವವರ ಹೆಸರುಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಈಗಾಗಲೆ ರಾಷ್ಟ್ರಪತಿಗಳಿಗೆ ಕಳಿಸಿಕೊಟ್ಟಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ನಾಮನಿರ್ದೇಶನ ಪಟ್ಟಿಯಲ್ಲಿ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ, ಮಾಜಿ ಸಂಸದ ನವಜೋತ್ ಸಿಂಗ್ ಸಿಧು, ಬಾಕ್ಸರ್ ಮೇರಿ ಕೋಮ್, ಮಲಯಾಳಂ ನಟ ಸುರೇಶ್ ಗೋಪಿ, ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಆರ್ಥಿಕ ತಜ್ಞ ನರೇಂದ್ರ ಜಾದವ್ ಹಾಗೂ ಹಿರಿಯ ಅಂಕಣಕಾರ ಸ್ವಪನ್ ದಾಸ್ ಗುಪ್ತ ಅವರ ಹೆಸರುಗಳಿವೆ ಎಂದು ತಿಳಿದುಬಂದಿದೆ.
ರಾಜ್ಯಸಭೆಯ ಒಟ್ಟು 245 ಸದಸ್ಯರಲ್ಲಿ 12 ಸದಸ್ಯರನ್ನು ನಾಮ ನಿರ್ದೇಶನದ ಮೂಲಕ ಆಯ್ಕೆ ಮಾಡಲು ಅವಕಾಶವಿದೆ. ರಾಜ್ಯಸಭೆಗೆ ಎನ್ ಡಿಎ ಸರ್ಕಾರ ಸದಸ್ಯರನ್ನು ನಾಮ ನಿರ್ದೇಶನಗೊಳಿಸುವುದರಿಂದ, ಮೇಲ್ಮನೆಯಲ್ಲಿ ಆಡಳಿತಾರೂಢ ಪಕ್ಷವನ್ನು ಪ್ರರಿನಿಧಿಸುವ ಸದಸ್ಯರ ಸಂಖ್ಯೆ ಹೆಚ್ಚಾಗಲಿದ್ದು ಮಸೂದೆಗಳ ಅಂಗೀಕಾರದ ವೇಳೆ ಸರ್ಕಾರಕ್ಕೆ ನೆರವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಹೆಚ್ಚುತ್ತಿರುವ ಸಬ್ಸಿಡಿ: ಗ್ರಾಮ ಪಂಚಾಯಿತಿ ಅನುದಾನಕ್ಕೆ ರಾಜ್ಯ ಸರ್ಕಾರ ಕೊಕ್- CAG ವರದಿ

SCROLL FOR NEXT