ತೃಪ್ತಿ ದೇಸಾಯಿ 
ದೇಶ

ಶನಿಸಿಂಗಣಾಪುರ ನಂತರ ದರ್ಗಾಕ್ಕೆ ಮುತ್ತಿಗೆ ಹಾಕಲು ಭೂಮಾತಾ ಬ್ರಿಗೇಡ್ ನಿರ್ಧಾರ

ಮಹಾರಾಷ್ಟ್ರದ ಶನಿಸಿಂಗಣಾಪುರ ದೇವಾಲಯದ ಗರ್ಭಗುಡಿಗೆ ಮಹಿಳೆಯರ ಪ್ರವೇಶದ ವಿಚಾರವಾಗಿ ಯಶಸ್ವಿ ಹೋರಾಟ ನಡೆಸಿದ ಭುಮಾತಾ ಬ್ರಿಗೇಡ್ ತಂಡ..

ಮುಂಬೈ: ಮಹಾರಾಷ್ಟ್ರದ ಶನಿಸಿಂಗಣಾಪುರ ದೇವಾಲಯದ ಗರ್ಭಗುಡಿಗೆ ಮಹಿಳೆಯರ ಪ್ರವೇಶದ ವಿಚಾರವಾಗಿ ಯಶಸ್ವಿ ಹೋರಾಟ ನಡೆಸಿದ ಭೂಮಾತಾ ಬ್ರಿಗೇಡ್ ತಂಡ, ಈಗ ಎಪ್ರಿಲ್ 28ರಂದು ಮುಂಬೈನ ಹಜಿ ಅಲಿ ದರ್ಗಾಕ್ಕೆ ಮಸ್ಲೀಂ ಮಹಿಳೆಯರ ಪ್ರವೇಶದ ಕುರಿತು ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಭೂಮಾತಾ ಬ್ರಿಗೇಡ್ ಅಧ್ಯಕ್ಷೆ ತೃಪ್ತಿ ದೇಸಾಯಿ ಹೇಳಿದ್ದಾರೆ.
ಅಹಮದಾಬಾದ್ ನ ಶನಿಸಿಂಗಣಾಪುರ, ನಾಸಿಕ್ ನ ತ್ರಿಯಂಬಕೇಶ್ವರ ಶಿವ ದೇವಾಲಯಗಳ ಗರ್ಭಗುಡಿಗೆ ಮಹಿಳೆಯರ ಪ್ರವೇಶದ ಕುರಿತು ಪ್ರತಿಭಟನೆ ನಡೆಸಿ ಯಶಸ್ವಿಯಾದ ಬಳಿಕ ಸುಮಾರು 20ಕ್ಕೂ ಅಧಿಕ ಎನ್ ಜಿಒ ಹಾಗೂ ಮಾನವ ಹಕ್ಕು ಹೋರಾಟಗಾರರು "ಹಾಜೀ ಅಲಿ ಸಬ್ ಕೇಲಿಯೇ" ಎಂಬ ಹೆಸರಿನಡಿಯಲ್ಲಿ ಮುಂಬೈನ ಹಜಿ ಅಲಿ ದರ್ಗಾಕ್ಕೆ ಮಹಿಳೆಯರ ಪ್ರವೇಶ ಕೋರಿ ಶಾಂತಿಯುತ ಪ್ರತಭಟನೆ ನಡೆಸಲಿದ್ದಾರೆ ಎಂದು ಘೋಷಿಸಿದ್ದಾರೆ.
ಅರಬ್ಬಿ ಸಮುದ್ರದ ಬಳಿಯಿರುವ 15ನೇ ಶತಮಾನದ ಈ ಸೂಫೀ ದರ್ಗಾಕ್ಕೆ ಮಹಿಳೆಯರ ಭೇಟಿ ಹಿಂದಿನಿಂದಲೂ ನಿಷೇಧಿಸಲಾಗಿದೆ. ಪ್ರತಿನಿತ್ಯ ನೂರಾರು ಮಂದಿ ಈ ದರ್ಗಾಕ್ಕೆ ಭೇಟಿ ನೀಡುತ್ತಾರೆ. ಆದರೆ ಮಹಿಳೆಯರ ಭೇಟಿಯನ್ನು ನಿಷೇಧಿಸಿ ಈ ಪ್ರತಿಭಟನೆ ನಡೆಸುತ್ತೇವೆ ಎಂದು ದೇಸಾಯಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT