ಸಮಾಜವಾದಿ ಪಕ್ಷದ ಮುಖಂಡ ಆಶು ಮಲೀಕ್ 
ದೇಶ

ದೇಶವಿರೋಧಿಗಳನ್ನು ಶಿಕ್ಷಿಸಲು ಕಾನೂನು ರೂಪಿಸಿ: ಪ್ರಧಾನಿ ಮೋದಿಗೆ ಎಸ್ ಪಿ ನಾಯಕನ ಒತ್ತಾಯ

ದೇಶವಿರೋಧಿಗಳನ್ನು ಶಿಕ್ಷಿಸಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕಾನೂನು ರೂಪಿಸಬೇಕೆಂದು ಉತ್ತರ ಪ್ರದೇಶದ ಮಾಜಿ ಸಚಿವ, ಸಮಾಜವಾದಿ ಪಕ್ಷದ ಮುಖಂಡ ಆಶು ಮಲೀಕ್ ಒತ್ತಾಯಿಸಿದ್ದಾರೆ.

ಮಥುರಾ: ದೇಶವಿರೋಧಿಗಳನ್ನು ಶಿಕ್ಷಿಸಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕಾನೂನು ರೂಪಿಸಬೇಕೆಂದು ಉತ್ತರ ಪ್ರದೇಶದ ಮಾಜಿ ಸಚಿವ, ಸಮಾಜವಾದಿ ಪಕ್ಷದ ಮುಖಂಡ ಆಶು ಮಲೀಕ್ ಒತ್ತಾಯಿಸಿದ್ದಾರೆ.
ದೇಶವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರು ಯಾವೂದೇ ಧರ್ಮ, ಜಾತಿಯವರಾಗಿದ್ದರೂ ಅವರನ್ನು ಶಿಕ್ಷಿಸುವ ಕಾನೂನು ಜಾರಿಯಾಗಬೇಕು, ಕೇಂದ್ರ ಸರ್ಕಾರ ಶಾಸನದ ಮೂಲಕ ಇಂಥದ್ದೊಂದು ಕಾನೂನನ್ನು ಜಾರಿಗೊಳಿಸಬೇಕೆಂದು ಆಶು ಮಲೀಕ್ ಹೇಳಿದ್ದಾರೆ.
ಇನ್ನು ದಾರುಲ್ ಉಲೂಂ ದಿಯೊಬಂದ್ ಸಂಘಟನೆ ಬಗ್ಗೆ ಮಾತನಾಡಿರುವ ಮಲೀಕ್, ಬಿಜೆಪಿ ನಾಯಕರು ಸಂಘಟನೆ ವಿರುದ್ಧ ಆರೋಪ ಮಾಡುವ ಮೊದಲು, ದಾರುಲ್ ಉಲೂಂ ದಿಯೋಬಂದ್ ನಡೆಸುತ್ತಿರುವ ಧಾರ್ಮಿಕ ಶಾಲೆಯ ಚಟುವಟಿಕೆಗಳನ್ನು ವೀಕ್ಷಿಸಲಿ ಎಂದು ಹೇಳಿದ್ದಾರೆ.
ದಾರುಲ್ ಉಲೂಂ ದಿಯೋಬಂದ್ ನಡೆಸುತ್ತಿರುವ ಧಾರ್ಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬ್ರಾತೃತ್ವ, ದೇಶಭಕ್ತಿಯ ಪಾಠ ಮಾಡಲಾಗುತ್ತದೆ. ದಿಯೋಬಂದ್ ನ ಬಗ್ಗೆ  ಮಾತನಾಡುವವರು ಅದು ಮೌಲಾನಾ ಮಹ್ಮುದುಲ್ ಹಸನ್ ಅವರ ಧಾರ್ಮಿಕ ಭೂಮಿ, ಅಲ್ಲಿ ಸ್ವಾತಂತ್ರ್ಯ ಚಳುವಳಿಯ ವೇಳೆ ಜನರು ಪ್ರಾಣತ್ಯಾಗ ಮಾಡಿದ್ದಾರೆಂಬುದನ್ನು ಗಮನದಲ್ಲಿಟ್ಟುಕೊಂಡು ಮಾತನಾಡಲಿ ಎಂದು ಹೇಳಿದ್ದಾರೆ. 
ಭಾರತ ಮಾತಾ ಕಿ ಜೈ ಘೋಷಣೆ ಕೂಗುವುದರ ವಿರುದ್ಧ ಫತ್ವಾ ಹೊರಡಿಸಿದ್ದಕ್ಕಾಗಿ ಆರ್ ಎಸ್ ಎಸ್ ಹಾಗೂ ಬಿಜೆಪಿ ದಾರುಲ್ ಉಲೂಂ ದಿಯೋಬಂದ್ ಸಂಘಟನೆ ವಿರುದ್ಧ ವಾಗ್ದಾಳಿ ನಡೆಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT