ಕರುಣಾ ಶುಕ್ಲಾ 
ದೇಶ

ಪ್ರಧಾನಿ ಮೋದಿ ಸುಳ್ಳುಗಾರ, ಆರ್ ಎಸ್ಎಸ್ ನಿಂದ ಆಜಾದಿ ಬೇಕು: ವಾಜಪೇಯಿ ಸಂಬಂಧಿ ಕರುಣಾ ಶುಕ್ಲಾ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸುಳ್ಳು ಹೇಳುವವರೆಂದು ಆರೋಪಿಸಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸಂಬಂಧಿ ಕರುಣಾ ಶುಕ್ಲಾ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸುಳ್ಳು ಹೇಳುವವರೆಂದು ಆರೋಪಿಸಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸಂಬಂಧಿ ಕರುಣಾ ಶುಕ್ಲಾ ಆರ್ ಎಸ್ ಎಸ್ ನಿಂದ ತಮಗೂ ಆಜಾದಿ ಬೇಕು ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಗೆಲ್ಲಲು ನರೇಂದ್ರ ಮೋದಿ ಸುಳ್ಳು ಭರವಸೆಗಳನ್ನು ನೀಡಿದ್ದಾರೆ. ನಾನು ಹಲವು ಚುನಾವಣೆಗಳನ್ನು, ಸರ್ಕಾರ ರಚನೆಯನ್ನು ನೋಡಿದ್ದೇನೆ ಆದರೆ ಒಬ್ಬ ವ್ಯಕ್ತಿ(ಮೋದಿ) ಕೇವಲ ಸುಳ್ಳುಗಳಿಂದಲೇ ಚುನಾವಣೆ ಗೆದ್ದಿರುವುದನ್ನು ನೋಡಿರುವುದು ಇದೇ ಮೊದಲು ಎಂದು ಕರುಣಾ ಶುಕ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.   
ಆರ್ ಎಸ್ಎಸ್ ಹಾಗೂ ಹಿಂದೂ ಸಂಘಟನೆಗಳ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ಕರುಣಾ ಶುಕ್ಲಾ, ಕನ್ಹಯ್ಯ ಕುಮಾರ್ ಮಾದರಿಯಲ್ಲೇ ತಮಗೂ ಆರ್ ಎಸ್ ಎಸ್ ನಿಂದ ಆಜಾದಿ ಬೇಕು ಎಂದು ಹೇಳಿದ್ದಾರೆ. 2014 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರುಣಾ ಶುಕ್ಲಾ ಕಾಂಗ್ರೆಸ್ ಸೇರ್ಪಡೆಗೊಂಡು ಛತ್ತೀಸ್ ಗಢದ ಬಿಲಾಸ್ ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT