ಕರುಣಾ ಶುಕ್ಲಾ 
ದೇಶ

ಪ್ರಧಾನಿ ಮೋದಿ ಸುಳ್ಳುಗಾರ, ಆರ್ ಎಸ್ಎಸ್ ನಿಂದ ಆಜಾದಿ ಬೇಕು: ವಾಜಪೇಯಿ ಸಂಬಂಧಿ ಕರುಣಾ ಶುಕ್ಲಾ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸುಳ್ಳು ಹೇಳುವವರೆಂದು ಆರೋಪಿಸಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸಂಬಂಧಿ ಕರುಣಾ ಶುಕ್ಲಾ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸುಳ್ಳು ಹೇಳುವವರೆಂದು ಆರೋಪಿಸಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸಂಬಂಧಿ ಕರುಣಾ ಶುಕ್ಲಾ ಆರ್ ಎಸ್ ಎಸ್ ನಿಂದ ತಮಗೂ ಆಜಾದಿ ಬೇಕು ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಗೆಲ್ಲಲು ನರೇಂದ್ರ ಮೋದಿ ಸುಳ್ಳು ಭರವಸೆಗಳನ್ನು ನೀಡಿದ್ದಾರೆ. ನಾನು ಹಲವು ಚುನಾವಣೆಗಳನ್ನು, ಸರ್ಕಾರ ರಚನೆಯನ್ನು ನೋಡಿದ್ದೇನೆ ಆದರೆ ಒಬ್ಬ ವ್ಯಕ್ತಿ(ಮೋದಿ) ಕೇವಲ ಸುಳ್ಳುಗಳಿಂದಲೇ ಚುನಾವಣೆ ಗೆದ್ದಿರುವುದನ್ನು ನೋಡಿರುವುದು ಇದೇ ಮೊದಲು ಎಂದು ಕರುಣಾ ಶುಕ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.   
ಆರ್ ಎಸ್ಎಸ್ ಹಾಗೂ ಹಿಂದೂ ಸಂಘಟನೆಗಳ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ಕರುಣಾ ಶುಕ್ಲಾ, ಕನ್ಹಯ್ಯ ಕುಮಾರ್ ಮಾದರಿಯಲ್ಲೇ ತಮಗೂ ಆರ್ ಎಸ್ ಎಸ್ ನಿಂದ ಆಜಾದಿ ಬೇಕು ಎಂದು ಹೇಳಿದ್ದಾರೆ. 2014 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರುಣಾ ಶುಕ್ಲಾ ಕಾಂಗ್ರೆಸ್ ಸೇರ್ಪಡೆಗೊಂಡು ಛತ್ತೀಸ್ ಗಢದ ಬಿಲಾಸ್ ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT