ಸುಬ್ರಹ್ಮಣಿಯನ್ ಸ್ವಾಮಿ 
ದೇಶ

ಆಪರೇಷನ್ ಬ್ಲೂ ಸ್ಟಾರ್ ಕಡತಗಳನ್ನು ಬಹಿರಂಗಪಡಿಸಲು ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹ

ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಆಪರೇಶನ್ ಬ್ಲೂ ಸ್ಟಾರ್ ಕಾರ್ಯಾಚರಣೆಯ ಕಡತಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪಗ್ವಾರ: ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಆಪರೇಶನ್ ಬ್ಲೂ ಸ್ಟಾರ್ ಕಾರ್ಯಾಚರಣೆಯ ಕಡತಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯ(ಎಲ್ ಪಿ ಯು) ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಆಪರೇಷನ್ ಬ್ಲೂ ಸ್ಟಾರ್ ಕಾರ್ಯಾಚರಣೆ ಸರಿಯಾಗಿ ಯೋಚಿಸದೇ ಕೈಗೊಂಡ ಮೂರ್ಖತನದ ಕ್ರಮ ಎಂದು ಹೇಳಿದ್ದು ಆ ಕುರಿತು ಕಡತಗಳನ್ನು ಬಹಿರಂಗಪಡಿಸಿದರೆ ಅದರ ಬಗ್ಗೆ ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿ ತಿಳಿಯಲಿದೆ ಎಂದಿದ್ದಾರೆ. 1984 ರಲ್ಲಿ ಗೋಲ್ಡನ್ ಟೆಂಪಲ್ ಗೆ ಸೇನೆ ಪ್ರವೇಶಿಸಿದರ ಬಗ್ಗೆ ಮಾತನಾಡಿರುವ ಸ್ವಾಮಿ, ಸೇನೆ ಪ್ರವೇಶಿಸಿದ್ದನ್ನು ನಾನು ಖಂಡಿಸಿದೆ. ಆದರೆ ಬಹುತೇಕ ಹಿಂದೂಗಳು ನನ್ನ ನಿಲುವಿನಿಂದ ಕೋಪಗೊಂಡಿದ್ದರು, ಇದರಿಂದಾಗಿ ನಾನು ಚುನಾವಣೆಯನ್ನೂ ಸೋಲಬೇಕಾಯಿತು ಆದರೆ ಅದ್ಯಾವುದಕ್ಕೂ ನಾನು ಚಿಂತೆ ಮಾಡಲಿಲ್ಲ ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.

ಆಪರೇಷನ್ ಬ್ಲೂ ಸ್ಟಾರ್ ಕಾರ್ಯಾಚರಣೆಯಲ್ಲಿ ಗೋಲ್ಡನ್ ಟೆಂಪಲ್ ಗೆ ಸೇನೆ ಪ್ರವೇಶಿಸಿದ್ದು ತಪ್ಪು ಎಂಬುದು ಕಾಲಕ್ರಮೇಣವಾಗಿ ಎಲ್ಲರಿಗೂ ಮನವರಿಕೆಯಾಗಿದೆ ಎಂದು ಸ್ವಾಮಿ ಹೇಳಿದ್ದು ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಧಾರ್ಮಿಕ ಬೋಧಕನಾಗಿದ್ದ ಮಾದಕದ್ರವ್ಯದ ವಿರುದ್ಧ ಧ್ವನಿ ಎತ್ತಿದ್ದ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT