ಮಾಲೆಗಾಂವ್ ಸ್ಫೋಟ 
ದೇಶ

ಮಾಲೆಗಾಂವ್ ಸ್ಫೋಟ ಪ್ರಕರಣ: ಎಲ್ಲಾ 9 ಆರೋಪಿಗಳು ದೋಷಮುಕ್ತ

2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರೆತೆಯುಂಟಾದ ಕಾರಣ ಎಲ್ಲಾ 9 ಮುಸ್ಲಿಂ ಆರೋಪಿಗಳನ್ನು ಮುಂಬೈ ನ್ಯಾಯಾಲಯ ಸೋಮವಾರ ದೋಷಮುಕ್ತಗೊಳಿಸಿ...

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರೆತೆಯುಂಟಾದ ಕಾರಣ ಎಲ್ಲಾ 9 ಮುಸ್ಲಿಂ ಆರೋಪಿಗಳನ್ನು ಮುಂಬೈ ನ್ಯಾಯಾಲಯ ಸೋಮವಾರ ದೋಷಮುಕ್ತಗೊಳಿಸಿ, ಬಿಡುಗಡೆಗೆ ಆದೇಶ ನೀಡಿದೆ.

2006ರಲ್ಲಿ ಮಾಲೆಗಾಂವ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 37 ಮಂದಿ ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯವು ಇದೀಗ ಪ್ರಕರಣವನ್ನು ಕೈಬಿಟ್ಟಿದ್ದು, ಯುವಕರನ್ನು ದೋಷಾರೋಪದಿಂದ ಮುಕ್ತಗೊಳಿಸಿ ಜಸ್ಟೀಸ್ ವಿವಿ ಪಾಟೀಲ್ ತೀರ್ಪು ನೀಡಿದರು.

ಈ ಪ್ರಕರಣದ ಬಗ್ಗೆ ಮೊದಲು ಭಯೋತ್ಪಾದನಾ ನಿಗ್ರಹ ದಳ ತನಿಖೆ ನಡೆಸಿ ನಿಷೇಧಿತ ಸಿಮಿ ಉಗ್ರಗಾಮಿ ಸಂಘಟನೆಗೆ ಸೇರಿದ್ದ ನೂರುಲ್ ಹುದಾ, ಶಬ್ಬೀರ್ ಅಹ್ಮದ್, ರಾಯೀಸ್ ಅಹ್ಮದ್, ಸಲ್ಮಾನ್ ಫಾರ್ಸಿ, ಫೋರೋಘ್ ಮಗ್ದುಮಿ, ಶೇಖ್ ಮೊಹಮ್ಮದ್ ಅಲಿ, ಆಸಿಫ್ ಖಾನ್, ಮೊಹಮ್ಮದ್ ಝಹೀದ್ ಹಾಗೂ ಅಬ್ರಾರ್ ಅಹ್ಮದ್ ಎಂಬುವವರನ್ನು ಬಂಧಿತ್ತು. ಅಲ್ಲದೆ, ಈ ಸಂಘಟನೆ ಪಾಕ್ ಮೂಲದ ಲಷ್ಕರ್ ಎ ತೊಯ್ಬಾ ಸಂಘಟನೆಯ ನೆರವಿನ ಮೂಲಕ ಸ್ಫೋಟ ಕೃತ್ಯಗಳನ್ನು ಎಸಗಿತ್ತು ಎಂದು ತನಿಖಾ ದಳ ಹೇಳಿತ್ತು. ನಂತರ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ಮತ್ತು ಎಟಿಎಸ್ ಜಂಟಿಯಾಗಿ ತನಿಖೆ ನಡೆಸಿದ್ದವು.

ನಂತರ ಇವರಲ್ಲಿ 6 ಮಂದಿ 2011ರ ನವೆಂಬರ್ ತಿಂಗಳಿನಲ್ಲಿ ಜಾಮೀನು ಪಡೆದುಕೊಂಡಿದ್ದರು. ಒಬ್ಬ ಆರೋಪಿ ಸಾವನ್ನಪ್ಪಿದ್ದ, ಇಬ್ಬರು ಆರೋಪಿಗಳು ದೋಷಿಯಾಗಿದ್ದರು.

ಪ್ರಕರಣ ಸಂಬಂಧ ಕಳೆದ ವಾರವಷ್ಟೇ ರಾಷ್ಟ್ರೀಯ ತನಿಖಾ ದಳ, 2006ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಈ 9 ಮಂದಿ ಮುಸ್ಲಿಂ ಯುವಕರು ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಳಿಲ್ಲ ಎಂದು ಮುಂಬೈ ಕೋರ್ಟ್ ಗೆ ತಿಳಿಸಿತ್ತು. ಇದರಿಂದಾಗಿ ಎಲ್ಲಾ ಆರೋಪಿಗಳು ದೋಷಮುಕ್ತರಾಗಲು ಹಾದಿ ಸುಲಭ ದಾರಿ ಸಿಕ್ಕಂತಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT