ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ (ಸಂಗ್ರಹ ಚಿತ್ರ) 
ದೇಶ

ಪ್ರಜಾಪ್ರಭುತ್ವದ ಪ್ರಸ್ತುತತೆಯನ್ನೇ ಬಿಜೆಪಿ ಪ್ರಶ್ನಿಸುತ್ತಿದೆ: ಕಾಂಗ್ರೆಸ್ ಟೀಕೆ

ಉತ್ತರಾಖಂಡ್ ನಲ್ಲಿ ಹೇರಲಾಗಿರುವ ರಾಷ್ಟ್ರಪತಿ ಆಡಳಿತದ ವಿರುದ್ಧ ಬಿಜೆಪಿ ಹಾಗೂ ಕೇಂದ್ರದ ಆಡಳಿತರೂಢ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದ್ದು, ಪ್ರಜಾಪ್ರಭುತ್ವದ ಪ್ರಸ್ತುತತೆಯನ್ನೇ...

ನವದೆಹಲಿ: ಉತ್ತರಾಖಂಡ್ ನಲ್ಲಿ ಹೇರಲಾಗಿರುವ ರಾಷ್ಟ್ರಪತಿ ಆಡಳಿತದ ವಿರುದ್ಧ ಬಿಜೆಪಿ ಹಾಗೂ ಕೇಂದ್ರದ ಆಡಳಿತರೂಢ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದ್ದು, ಪ್ರಜಾಪ್ರಭುತ್ವದ ಪ್ರಸ್ತುತತೆಯನ್ನೇ ಬಿಜೆಪಿ ಪ್ರಶ್ನಿಸುತ್ತಿದೆ ಎಂದು ಸೋಮವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಅವರು, ಉತ್ತರಾಖಂಡ್ ನಲ್ಲಿ ಹೇರಲಾಗಿರುವ ರಾಷ್ಟ್ರಪತಿ ಆಡಳಿತ ಅತ್ಯಂತ ಮುಖ್ಯವಾದ ವಿಚಾರ. ಈ ವಿಚಾರವನ್ನು ಚರ್ಚೆ ಮಾಡಲೇಬೇಕಿದೆ. ವಿಷಯ ನ್ಯಾಯಾಲಯಲದಲ್ಲಿದೆ ಎಂದು ಹೇಳಿದೆ ಬಿಜೆಪಿ ಇದರಿಂದ ನುಣುಚಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಉತ್ತರಾಖಂಡ್ ವಿಚಾರ ಪ್ರಜಾಪ್ರಭುತ್ವದ ಪ್ರಸ್ತುತತೆ ವಿಚಾರವಾಗಿದ್ದು, ಪ್ರಜಾಪ್ರಭುತ್ವದ ಪ್ರಸ್ತುತತೆಯನ್ನೇ ಬಿಜೆಪಿ ಪ್ರಶ್ನಿಸುತ್ತಿದೆ. ಒಂದು ವೇಳೆ ಬಿಜೆಪಿ ಪ್ರತಿಪಕ್ಷ ಸ್ಥಾನದಲ್ಲಿದ್ದರೆ. ಈ ವಿಚಾರವನ್ನು ಬಿಡುತ್ತಿರಲಿಲ್ಲ. ನ್ಯಾಯಾಲಯದಲ್ಲಿದ್ದರೂ ವಿಚಾರವನ್ನು ಚರ್ಚೆಗೆ ತರುತ್ತಿತ್ತು. ಹಾಗೆಯೇ ನಾವು ವಿಚಾರವನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಉತ್ತರಾಖಂಡ್ ಬಿಕ್ಕಟ್ಟು ವಿಚಾರ ಕುರಿತಂತೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ಉತ್ತರಾಖಂಡ್ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ಆದರೆ, ಪ್ರಸ್ತುತ ಈ ವಿಚಾರ ಸುಪ್ರೀಂಕೋರ್ಟ್ ಅಂಗಳದಲ್ಲಿದ್ದು, ವಿಚಾರ ಸಂಬಂಧ ಚರ್ಚೆ ನಡೆಸಲು ಸಾಧ್ಯವಾಗುವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT