ವೆಂಕಯ್ಯ ನಾಯ್ಡು 
ದೇಶ

ಸಂಸತ್ತಿನಲ್ಲಿ ಯಾವುದೇ ವಿಷಯದ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಿದೆ: ನಾಯ್ಡು

ಇಂದಿನಿಂದ ಆರಂಭವಾಗಿರುವ ಸಂಸತ್ತಿನ ಬಜೆಟ್‌ ಅಧಿವೇಶನದ 2ನೇ ಹಾಗೂ ಕೊನೆಯ ಚರಣದ ಕಲಾಪಕ್ಕೆ ಪ್ರತಿಪಕ್ಷಗಳು ಅಡ್ಡಿಪಡಿಸುವುದಿಲ್ಲ ಎಂಬ ವಿಶ್ವಾಸ...

ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ಬಜೆಟ್‌ ಅಧಿವೇಶನದ 2ನೇ ಹಾಗೂ ಕೊನೆಯ ಚರಣದ ಕಲಾಪಕ್ಕೆ ಪ್ರತಿಪಕ್ಷಗಳು ಅಡ್ಡಿಪಡಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ಅವರು, ಸದನದಲ್ಲಿ ಯಾವುದೇ ವಿಷಯದ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದಿದ್ದಾರೆ.
'ಈ ಬಾರಿಯ ಕಲಾಪ ವರ್ಥವಾಗುವುದಿಲ್ಲ ಅಂತ ನಾನು ಭಾವಿಸಿದ್ದೇನೆ. ಏಕೆಂದರು ಇಂದು ಬಜೆಟ್ ಅಧಿವೇಶನದ ಎರಡನೇ ಭಾಗ. ಹಣಕಾಸಿನ ಕುರಿತು ಚರ್ಚೆಯಾಗಬೇಕಿದೆ' ಎಂದು ನಾಯ್ಡು ತಿಳಿಸಿದ್ದಾರೆ.
ಸಂಸತ್ತಿನಲ್ಲಿ ಯಾವುದೇ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲು ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಇದನ್ನು ಪ್ರತಿಪಕ್ಷದವರು ಅರಿತುಕೊಳ್ಳಬೇಕು ಎಂದು ನಾಯ್ಡು ಹೇಳಿದ್ದಾರೆ.
ಈ ಅಧಿವೇಶನದಲ್ಲಿ ಸರ್ಕಾರ ಮಹತ್ವದ ಜಿಎಸ್‌ಟಿ ಸೇರಿದಂತೆ 13 ಮಸೂದೆಗಳನ್ನು ಲೋಕಸಭೆಯಲ್ಲಿ ಮತ್ತು 11 ಮಸೂದೆಗಳನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿಕೊಳ್ಳುವ ಉದ್ದೇಶ ಹೊಂದಿದೆ. ಆದರೆ, ಕಾಂಗ್ರೆಸ್‌, ಜೆಡಿಯು ಮತ್ತು ಎಡರಂಗ ಸೇರಿದಂತೆ ಪ್ರಮುಖ ವಿಪಕ್ಷಗಳು ಉತ್ತರಾಖಂಡದಲ್ಲಿ ಕಾಂಗ್ರೆಸ್‌ ಸರಕಾರವನ್ನು ಉದ್ದೇಶಪೂರ್ವಕವಾಗಿ ವಜಾಗೊಳಿಸಲಾಗಿದ್ದು, ಈ ಬಗ್ಗೆ ಚರ್ಚೆ ನಡೆಯಬೇಕು ಎಂದು ಆಗ್ರಹಿಸಿ ಮೊದಲ ದಿನದಿಂದಲೇ ಗದ್ದಲ ಎಬ್ಬಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT