ಸಾಂದರ್ಭಿಕ ಚಿತ್ರ 
ದೇಶ

ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯಾತನಿಂದಲೇ ಅತ್ಯಾಚಾರ

4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲು ಯತ್ನಿಸಿದ್ದ ಘಟನೆಯೊಂದು ದೆಹಲಿಯ ಕಲ್ಯಾಣ್ ಪುರಿಯಲ್ಲಿ ಶನಿವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ...

ನವದೆಹಲಿ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲು ಯತ್ನಿಸಿದ್ದ ಘಟನೆಯೊಂದು ದೆಹಲಿಯ ಕಲ್ಯಾಣ್ ಪುರಿಯಲ್ಲಿ ಶನಿವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅತ್ಯಾಚಾರಕ್ಕೊಳಗಾದ ಬಾಲಕಿ ಶನಿವಾರ ಮಧ್ಯಾಹ್ನ ತನ್ನ ಅಜ್ಜಿಯ ಪಕ್ಕದಲ್ಲಿ ಮಲಗಿದ್ದ ವೇಳೆ ಯಾರಿಗೂ ತಿಳಿಯದಂತೆ ಮನೆಗೆ ಬಂದಿರುವ ಕಾಮುಕ ನೆರೆಮನೆಯಾತ ಶಬ್ಧ ಮಾಡದಂತೆ ಬಾಲಕಿಯನ್ನು ಹೊತ್ತೊಯ್ದಿದ್ದಾನೆ. ನಂತರ ಪಕ್ಕದಲ್ಲಿಯೇ ಇದ್ದ ತನ್ನ ಮನೆಯ ರೂಮಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಇದರಂತೆ ಬಾಲಕಿ ಕೂಗಾಡಿದಾಗ ಬಾಲಕಿಯ ಕತ್ತು ಹಿಸಿಕಿದ್ದಾನೆ.

ಬಾಲಕಿ ಪ್ರಜ್ಞೆ ತಪ್ಪಿ ಬಿದ್ದಾಗ ಬಾಲಕಿ ಸತ್ತು ಹೋಗಿದ್ದಾಳೆಂದು ತಿಳಿದು ಬಾಲಕಿಯನ್ನು ಮಹಡಿಯಿಂದ ಕೆಳಗೆ ಹಾಕಲು ಹೋಗಿದ್ದಾನೆ. ಈ ವೇಳೆ ಕಟ್ಟಡದ ಕೆಳಗೆ ಸಾಕಷ್ಟು ಮಂದಿ ಇದ್ದ ಕಾರಣ ಹೇಗಿದ್ದರೂ ಬಾಲಕಿ ಸತ್ತು ಹೋಗಿದ್ದಾಳೆಂದು ತಿಳಿದು ಮತ್ತೆ ಬಾಲಕಿಯ ಅಜ್ಜಿಯ ಪಕ್ಕದಲ್ಲಿ ಮಲಗಿಸಿ ಓಡಿಹೋಗಲು ನೋಡಿದ್ದಾನೆ.

ಈ ವೇಳೆ ಎಚ್ಚರಗೊಂಡಿರುವ ಅಜ್ಜಿ ಬಾಲಕಿಯ ಸ್ಥಿತಿಯನ್ನು ನೋಡಿ ಗಾಬರಿಯಿಂದ ಕೂಗಿದ್ದಾಳೆ. ನಂತರ ಕಾಮುಕನಿಗೆ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ್ದಾರೆ.

ಪ್ರಸ್ತುತ ಬಾಲಕಿಯನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಬಾಲಕಿಯ ತಂದೆ ತಾಯಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಘಟನೆ ನಡೆದಾಗ ಇಬ್ಬರು ಕೆಲಸಕ್ಕೆ ಹೋದ ಕಾರಣ ಬಾಲಕಿ ತನ್ನ ಅಜ್ಜಿಯ ಮನೆಯಲ್ಲಿದ್ದಳು.

ಘಟನೆ ನಂತರ ಸ್ಥಳೀಯರು ಅತ್ಯಾಚಾರಿಯನ್ನು ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ಅತ್ಯಾಚಾರಿಯ ವಿರುದ್ಧ ಅತ್ಯಾಚಾರ, ಕೊಲೆಗೆ ಯತ್ನ, ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT