ಲೆ.ಕರ್ನಲ್ ನಿರಂಜನ್ 
ದೇಶ

ಸಾಹಸ ಮೆರೆದ ಲೆ.ಕ. ನಿರಂಜನ್ ಹೆಸರು ಶೌರ್ಯ ಪ್ರಶಸ್ತಿಗೆ ಶಿಫಾರಸು

ಪಠಾಮ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿ ಘಟನೆ ವೇಳೆ ಸಾಹಸ ಮೆರೆದು ಹುತಾತ್ಮರಾಗಿದ್ದ ನಗರದ ಲೆ.ಕರ್ನಲ್ ನಿರಂಜನ್ ಅವರ ಹೆಸರನ್ನು ಶೌರ್ಯ ಪ್ರಶಸ್ತಿಗೆ...

ನವದೆಹಲಿ: ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿ ಘಟನೆ ವೇಳೆ ಸಾಹಸ ಮೆರೆದು ಹುತಾತ್ಮರಾಗಿದ್ದ ನಗರದ ಲೆ.ಕರ್ನಲ್ ನಿರಂಜನ್ ಅವರ ಹೆಸರನ್ನು ಶೌರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡಿರುವುದಾಗಿ ಎನ್ಎಸ್ ಜಿ ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದ ಪಾಲಕ್ಕಾಡ್ ಮೂಲದ ನಿರಂಜನ್ ಅವರು ಬೆಂಗಳೂರಿನ ದೊಡ್ಡಬೊಮ್ಮಸಂದ್ರದಲ್ಲಿನ ನಿವಾಸಿಯಾಗಿದ್ದರು, ಎನ್ ಎಸ್ ಜಿಯ ಬಾಂಬ್ ನಿಷ್ಕ್ರಿಯ ದಳದಲ್ಲಿ ಕಾರ್ಯನಿರ್ವಹಸುತ್ತಿದ್ದ ನಿರಂಜನ್ ಅವರು,  ಜ.2 ರಂದು ವಾಯುನೆಲೆ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಭಯೋತ್ಪಾದಕನ ದೇಹದ ಮೇಲೆ ಇದ್ದ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸುವಾಗ ಬಾಂಬ್ ವೊಂದು ಸ್ಫೋಟಗೊಂಡು ನಿರಂಜನ್ ಹಾಗೂ ಮತ್ತಿಬ್ಬರು ಯೋಧರು ಹುತಾತ್ಮರಾಗಿದ್ದರು.

ಇದೀಗ ನಿರಂಜನ್ ಸೇರಿ ಮೂವರು ಯೋಧರ ಹೆಸರನ್ನು ಶೌರ್ಯ ಚಕ್ರ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಗೃಹ ಸಚಿವಾಲಯಕ್ಕೆ ರಾಷ್ಟ್ರೀಯ ಭದ್ರತಾ ದಳ (ಎನ್ ಎಸ್ ಜಿ) ಈ ಶಿಫಾರಸ್ಸು ಮಾಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT