ಸಾಂದರ್ಭಿಕ ಚಿತ್ರ 
ದೇಶ

10 ವರ್ಷದ ಬಾಲಕನನ್ನು ಇರಿದು ಹತ್ಯೆ ಮಾಡಿದ ನೆರೆಮನೆಯಾತ

10 ವರ್ಷದ ಬಾಲಕನೊಬ್ಬನ್ನು ಮಾನಸಿಕವಾಗಿ ಅಸ್ವಸ್ಥನಾಗಿದ್ದ ನೆರೆಮನೆಯಾದ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆಯೊಂದು ಮಂಗಳವಾರ ನಡೆದಿದೆ...

ಕೊಚ್ಚಿ: 10 ವರ್ಷದ ಬಾಲಕನೊಬ್ಬನ್ನು ಮಾನಸಿಕವಾಗಿ ಅಸ್ವಸ್ಥನಾಗಿದ್ದ ನೆರೆಮನೆಯಾದ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆಯೊಂದು ಮಂಗಳವಾರ ನಡೆದಿದೆ.

ರಿಸ್ಟಿ (10) ಹತ್ಯೆಯಾದ ಬಾಲಕ. ಅಜಿ ದೇವಾಸಿಯಾ (40) ಹತ್ಯೆ ಮಾಡಿದ ವ್ಯಕ್ತಿ. ಇಂದು ಬೆಳಿಗ್ಗೆ ಹಾಲು ತರುವ ಸಲುವಾಗಿ ಮನೆಯ ಬಳಿಯಿದ್ದ ಅಂಗಡಿಗೆ ಬಾಲಕ ಹೋಗಿದ್ದಾನೆ. ಈ ವೇಳೆ ಹಾಲು ತೆಗೆದುಕೊಂಡು ಬರುತ್ತಿದ್ದ ಬಾಲಕನನ್ನು ನೋಡಿದ್ದ ಅಜಿ ಇದ್ದಕ್ಕಿದ್ದಂತೆ ಬಾಲಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ಬಾಲಕನ ಕುತ್ತಿಗೆ ಅಜಿ 17 ಬಾರಿ ಇರಿದಿದ್ದು, ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ಇದರಂತೆ ಕುಟುಂಬಸ್ಥರು ಬಾಲಕನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿದ್ದಾನೆಂದು ವೈದ್ಯರು ಹೇಳಿದ್ದಾರೆ.

ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಎರ್ನಾಕುಲಂ ಪೊಲೀಸರು, ಹತ್ಯೆ ಮಾಡಿದ ಅಜಿ ದೇವಾಸಿಯಾ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT