ಲೋಕಸಭೆಯಲ್ಲಿ ಮಾತನಾಡುತ್ತಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು(ಸಾಂದರ್ಭಿಕ ಚಿತ್ರ) 
ದೇಶ

ಕೊಲೆಗಡುಕರು ಬೋಧಕರಾಗುವುದು ಅಸಾಧ್ಯ: ವೆಂಕಯ್ಯ ನಾಯ್ಡು

ಹತ್ಯೆ ಮಾಡುವವರು ಬೋಧಕರಾಗಲು ಸಾಧ್ಯವಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ಸೋಮವಾರ...

ನವದೆಹಲಿ: ಹತ್ಯೆ ಮಾಡುವವರು ಬೋಧಕರಾಗಲು ಸಾಧ್ಯವಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ಸೋಮವಾರ ಲೋಕಸಭೆಯಲ್ಲಿ ಹೇಳಿದ್ದಾರೆ. ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಹೇರಿ ಮೋದಿ ಸರ್ಕಾರ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದೆ ಎಂದು ಕಾಂಗ್ರೆಸ್ ಆಪಾದಿಸಿದ್ದಕ್ಕೆ ಪ್ರತ್ಯುತ್ತರ ನೀಡುತ್ತಾ ಹೀಗೆ ಹೇಳಿದ್ದಾರೆ.
ಇ ಎಂ ಎಸ್ ನಂಬೂದರಿಪಾದ್ ಕಾಲದಿಂದ 100ಕ್ಕೂ ಹೆಚ್ಚು ಕಾಂಗ್ರೆಸ್ಸೇತರ ಸರ್ಕಾರವನ್ನು ವಜಾಗೊಳಿಸಿದ್ದ ಕಾಂಗ್ರೆಸ್, ಇದೀಗ ಬಿಜೆಪಿಯನ್ನು ಟೀಕಿಸುತ್ತಿದೆ. ಇದು ತುಂಬಾ ವಿಪರ್ಯಾಸ ಎಂದು ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.

ಇದಕ್ಕೂ ಮುನ್ನ ಕಾಂಗ್ರೆಸ್ ನ್ನು ಪಕ್ಷಾಂತರದ ತಾಯಿ ಎಂದು ಟೀಕಿಸಿದ ಅವರು 1959ನೇ ಇಸವಿಯಲ್ಲಿ ಕೇರಳದಲ್ಲಿ ಜನರಿಂದ ಆಯ್ಕೆಗೊಂಡ ಇ ಎಂಎಸ್ ನಂಬೂದರಿಪಾದ್ ಸರ್ಕಾರ ಅಧಿಕಾರಕ್ಕೆ ಬಂದಾಗ ಕೇಂದ್ರದಲ್ಲಿ ಇದ್ದ ಕಾಂಗ್ರೆಸ್ ಸರ್ಕಾರ ಅದನ್ನು ವಜಾ ಮಾಡಿತ್ತು ಎಂದು ನೆನಪಿಸಿದರು.

ಉತ್ತರಾಖಂಡ ವಿಷಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ನಿರ್ಧರಿಸಿರುವ ಬಿಜೆಪಿ, ಕೇಂದ್ರದಲ್ಲಿ ಕಾಂಗ್ರೆಸ್, ಜನತಾ ಪಕ್ಷ ಮತ್ತು ಯುನೈಟೆಡ್ ಫ್ರಂಟ್ ಅಧಿಕಾರದಲ್ಲಿದ್ದಾಗ ರಾಷ್ಟ್ರಪತಿ ಆಡಳಿತಕ್ಕೆ ಒಳಗಾದ ರಾಜ್ಯಗಳನ್ನು ಉದಾಹರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?