ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ 
ದೇಶ

ಸಿನಿಮಾ ಮಂದಿರಗಳಲ್ಲಿ ಮೋದಿ ಸರ್ಕಾರದ ಬಣ್ಣನೆ: ಶಿವಸೇನೆ ಟೀಕೆ

ಕೇಂದ್ರ ಸರ್ಕಾರದ ಮೇಲೆ ಮತ್ತೆ ವಾಗ್ದಾಳಿ ಮುಂದುವರಿಸಿರುವ ಶಿವಸೇನಾ ತನ್ನ ಮುಖವಾಣಿ ಸಾಮ್ನಾದಲ್ಲಿ ಸಿನಿಮಾ ಮಂದಿರಗಳಲ್ಲಿ...

ನವದೆಹಲಿ: ಕೇಂದ್ರ ಸರ್ಕಾರದ ಮೇಲೆ ಮತ್ತೆ ವಾಗ್ದಾಳಿ ಮುಂದುವರಿಸಿರುವ ಶಿವಸೇನಾ ತನ್ನ ಮುಖವಾಣಿ ಸಾಮ್ನಾದಲ್ಲಿ ಸಿನಿಮಾ ಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಮುನ್ನ ಮೋದಿ ಸರ್ಕಾರದ ಸಾಧನೆಗಳನ್ನ ಬಿಂಬಿಸುವ ದೃಶ್ಯಗಳನ್ನು ಪ್ರಸಾರ ಮಾಡುವ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದೆ.
 
ಮೋದಿ ಸರ್ಕಾರದ ಅಭಿವೃದ್ಧಿ ಚಿತ್ರಗಳನ್ನು ತೋರಿಸುವುದರಿಂದ ಪ್ರಯೋಜನವಾಗದು. ದೇಶದ ಶೇಕಡಾ 33ರಷ್ಟು ಪ್ರದೇಶಗಳು ಬರಗಾಲ ಎದುರಿಸುತ್ತಿದ್ದು, ಪರಿಹಾರ ಕಾರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು.

ಇನ್ನು ಮುಂದೆ ಸಿನಿಮಾ ಮಂದಿರಗಳಲ್ಲಿ ಪ್ರತಿ ಸಲ ಚಿತ್ರ ಪ್ರದರ್ಶನಕ್ಕೆ ಮುನ್ನ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ತೋರಿಸಬೇಕೆಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಹೇಳಿರುವುದಕ್ಕೆ ಪಕ್ಷದ ಮುಖವಾಣಿಯಲ್ಲಿ ಶಿವಸೇನೆ ತೀವ್ರವಾಗಿ ಟೀಕಿಸಿದೆ.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ದಿಯೋಕಾಂತ್ ಬರುವಾರವರು ನೀಡಿದ್ದ 'ಇಂಡಿಯಾ ಈಸ್ ಇಂದಿರಾ' ಹೇಳಿಕೆಗೆ ವೆಂಕಯ್ಯ ನಾಯ್ಡುರವರ ನರೇಂದ್ರ ಮೋದಿಯವರು ಭಾರತಕ್ಕೆ ದೇವರು ನೀಡಿದ ಕೊಡುಗೆ ಹೇಳಿಕೆಯನ್ನು ಶಿವಸೇನೆ ಹೋಲಿಕೆ ಮಾಡಿದೆ.

'' ಇದು ನೀವು ಮಾಡಿರುವ ಕೆಲಸವನ್ನು ತೋರಿಸುವ ಸಮಯವೇ? ಇದು ಶೈನಿಂಗ್ ಇಂಡಿಯಾ ಅಭಿಯಾನದ ತರಹ ಆಗಬಾರದು ಎಂದು ಸಂಪಾದಕೀಯದಲ್ಲಿ ಮುನ್ನೆಚ್ಚರಿಕೆ ನೀಡಲಾಗಿದೆ.

ಶಿವಸೇನೆ ಕೇಂದ್ರ ಎನ್ ಡಿಎ ಸರ್ಕಾರವನ್ನು ಟೀಕಿಸುತ್ತಿರುವುದು ಇದೇನು ಮೊದಲ ಸಲವಲ್ಲ. ಸರ್ಕಾರದ ಭಾಗವಾಗಿದ್ದರೂ ಕೂಡ 2014ರಿಂದ ಶಿವಸೇನೆಯನ್ನು ಬಿಜೆಪಿ ಪರಿಗಣಿಸುತ್ತಿರುವ ರೀತಿ ಅದಕ್ಕೆ ಇಷ್ಟವಾಗುತ್ತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT