ಯೋಗ ಗುರು ರಾಮ್ ದೇವ್ 
ದೇಶ

ಇಸ್ಲಾಂ, ಕುರಾನ್ ಅನುಸರಿಸುವಂತೆ ಸಂವಿಧಾನ ಹೇಳಿತ್ತೇ?: ಓವೈಸಿಗೆ ರಾಮ್ ದೇವ್

ಸಂವಿಧಾನವಿಲ್ಲದಿದ್ದರೆ ಭಾರತ್ ಮಾತಾ ಕಿ ಜೈ ಎನ್ನದವರ ತಲೆ ಕಡಿಯುತ್ತಿದ್ದೆ ಎಂದು ಹೇಳಿದ್ದ ಬಾಬಾ ರಾಮ್ ದೇವ್ ಅವರು ಇದೀಗ ಮತ್ತೆ ಓವೈಸಿ ವಿರುದ್ಧ ಕಿಡಿಕಾರಿದ್ದು, ಇಸ್ಲಾಂ ಅನುಸರಿಸುವಂತೆ, ಕುರನಾ ಓದುವಂತೆ...

ನವದೆಹಲಿ: ಸಂವಿಧಾನವಿಲ್ಲದಿದ್ದರೆ ಭಾರತ್ ಮಾತಾ ಕಿ ಜೈ ಎನ್ನದವರ ತಲೆ ಕಡಿಯುತ್ತಿದ್ದೆ ಎಂದು ಹೇಳಿದ್ದ ಬಾಬಾ ರಾಮ್ ದೇವ್ ಅವರು ಇದೀಗ ಮತ್ತೆ ಓವೈಸಿ ವಿರುದ್ಧ ಕಿಡಿಕಾರಿದ್ದು, ಇಸ್ಲಾಂ ಅನುಸರಿಸುವಂತೆ, ಕುರನಾ ಓದುವಂತೆ ನಮ್ಮ ಸಂವಿಧಾನ ಹೇಳಿದೆಯೇ ಎಂದು ಬುಧವಾರ ಪ್ರಶ್ನಿಸಿದ್ದಾರೆ.

ಭಾರತ್ ಮಾತಾ ಕಿ ಜೈ ವಿವಾದ ಕುರಿತಂತೆ ಈ ಹಿಂದೆ ಹೇಳಿಕೆ ನೀಡಿದ್ದರ ಕುರಿತಂತೆ ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಭಾರತ್ ಮಾತಾ ಕಿ ಜೈ ಎಂದು ಕೂಗಲೇಬೇಕೆಂದು ಸಂವಿಧಾನದಲ್ಲಿ ಎಲ್ಲಿಯೂ ಹೇಳಿಲ್ಲ. ಹಾಗಾಗಿ ಭಾರತ್ ಮಾತಾ ಕಿ ಜೈ ಎಂದು ಕೂಗುವುದಿಲ್ಲ ಎಂದು ಈ ಹಿಂದೆ ಓವೈಸಿ ಹೇಳಿದ್ದರು.

ಓವೈಸಿಯವರು ಇಸ್ಲಾಂ ಹಾಗೂ ಕುರಾನ್ ನ್ನು ಅನುಸರಿಸುತ್ತಿದ್ದು, ಇದನ್ನು ಅನುಸರಿಸುವಂತೆ ನಮ್ಮ ಸಂವಿಧಾನ ಹೇಳಿದೆಯೇ? ಹೇಳಿಲ್ಲ ಎಂದಾದ ಮೇಲೆ ಕುರಾನ್ ನ್ನು ಯಾವ ಕಾರಣಕ್ಕೆ ಓದುತ್ತಿದ್ದಾರೆ, ಇಸ್ಲಾಂ ಧರ್ಮವನ್ನೇಕೆ ಅನುಸರಿಸುತ್ತಿದ್ದಾರೆಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಪ್ರಚೋದನಾಕಾರಿ ಹಾಗೂ ದ್ವೇಷ ಹುಟ್ಟಿಸುವ ಹೇಳಿಕೆಯನ್ನು ನೀಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಸಭೆಯಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಜೆಎನ್ ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು ಕೇಳಿಬಂದಿವೆ. ಪ್ರತಿಯೊಬ್ಬರೂ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗವಂತಾಗಬೇಕು. ಯುವಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಇದು ಪೂರಕವಾಗಬೇಕೆಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಹೈದರಾಬಾದ್ ನ ಸಂಸದ ಓವೈಸಿ, ನನ್ನ ಕುತ್ತಿಗೆ ಮೇಲೆ ಚೂರಿ ಇಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ. ಘೋಷಣೆಯನ್ನು ಕೂಗಿ, ದೇಶಭಕ್ತಿ ಸಾಬೀತುಪಡಿಸಬೇಕೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ. ಹಾಗಾಗಿ ಕಾನೂನು ಉಲ್ಲಂಘನೆಯ ಪ್ರಶ್ನೆ ಇಲ್ಲಿ ಹುಟ್ಟುವುದಿಲ್ಲ. ಈ ನಿಲುವಿಗೆ ನಾನು ಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಘೋಷಣೆ ಕೂಗುವುದಿಲ್ಲ ಎಂದು ಹೇಳಿದ್ದರು.

ಇದರಂತೆ ಭಾರತ್ ಮಾತಾ ಕಿ ಜೈ ಘೋಷಣೆ ವಿವಾದ ಹುಟ್ಟುಕೊಂಡಿತ್ತು. ನಂತರ ರಾಜಕೀಯ ಗಣ್ಯರು ಹಾಗೂ ಇತರೆ ಕ್ಷೇತ್ರದ ಗಣ್ಯರು ಕೂಡ ವಿವಾದ ಕುರಿತಂತೆ ಒಬ್ಬರ ಮೇಲೊಬ್ಬರಂತೆ ಕೆಸರೆರಾಚಕ್ಕೆ ಮುಂದಾಗಿದ್ದರು. ವಿವಾದ ಕುರಿತಂತೆ ಈ ಹಿಂದೆ ಮಾತನಾಡಿದ್ದ ಯೋಗ ಗುರು ಬಾಬಾ ರಾಮ್ ದೇವ್ ಅವರು,  ನಾವು ನಮ್ಮ ದೇಶದ ಕಾನೂನು ಹಾಗೂ ಸಂವಿಧಾನವನ್ನು ಗೌರವಿಸುತ್ತೇವೆ. ಇಲ್ಲದೆ ಹೋಗಿದ್ದರೆ, ಭಾರತ ಮಾತೆಗೆ ಅಗೌರವ ಸೂಚಿಸುವ ಒಬ್ಬರ ತಲೆಯಲ್ಲ ಸಾವಿರ ಹಾಗೂ ಲಕ್ಷ ತಲೆಗಳನ್ನು ಉರುಳಿಸುತ್ತಿದ್ದೆವು. ಸಾರ್ವಜನಿಕ ಸಭೆಯಲ್ಲಿ ರೀತಿಯ ಹಿಂಸಾತ್ಮಕ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT